ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

32,558ಎ ಕರೆ ಪ್ರದೇಶ ಭೂಕಬಳಿಕೆ -ದೇವೇಗೌಡ

By Staff
|
Google Oneindia Kannada News

32,558ಎ ಕರೆ ಪ್ರದೇಶ ಭೂಕಬಳಿಕೆ -ದೇವೇಗೌಡ
ಭೂಅವ್ಯವಹಾರಗಳಿಗೆ ಕಡಿವಾಣ ಹಾಕದಿದ್ದರೆ ಮುಂದಿನ ಕ್ರಮ : ಧರ್ಮಸಿಂಗ್‌ಗೆ ಪತ್ರ

ಬೆಂಗಳೂರು : ನಗರದ ಸುತ್ತಮುತ್ತಲಿನ ಬೆಲೆಬಾಳುವ ಸರ್ಕಾರಿ ಭೂಮಿ ಪ್ರಭಾವಿಗಳ ಪಾಲಾಗುತ್ತಿದೆ. ಸುಮಾರು 32,558 ಎಕರೆ ಪ್ರದೇಶವನ್ನು ಆಕ್ರಮಿಸಿಕೊಳ್ಳಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಸರ್ಕಾರದ ಆಡಳಿತಾವಧಿಯಲ್ಲಿ ಬೆಂಗಳೂರು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ವ್ಯಾಪಕ ಭೂಅವ್ಯವಹಾರಗಳು ನಡೆದಿವೆ. ಈ ಬಗ್ಗೆ ಧರ್ಮಸಿಂಗ್‌ ಅವರಿಗೆ ಅನೇಕ ಪತ್ರಗಳನ್ನು ಬರೆದಿದ್ದೇನೆ ಎಂದರು.

ಪ್ರಭಾವಿಗಳ ಭೂ ಆಕ್ರಮಣದಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಭ್ರಷ್ಟತೆಗೆ ಧರ್ಮಸಿಂಗ್‌ ಕಡಿವಾಣ ಹಾಕಿ, ತಪ್ಪಿತಸ್ಥರ ಮೇಲೆ ಕ್ರಮಜರುಗಿಸದಿದ್ದರೆ, ಅವರಿಗೆ ಬರೆದಿದ್ದ ಪತ್ರಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುವುದಾಗಿ ದೇವೇಗೌಡ ಎಚ್ಚರಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X