ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೀತಾ ನಾಗಭೂಷಣಗೆ ಅನುಪಮಾ ಪ್ರಶಸ್ತಿಯ ಗರಿ

By Staff
|
Google Oneindia Kannada News

ಗೀತಾ ನಾಗಭೂಷಣಗೆ ಅನುಪಮಾ ಪ್ರಶಸ್ತಿಯ ಗರಿ
ಸಾಹಿತ್ಯ ಕೃಷಿ ಗುರ್ತಿಸಿ ಕರ್ನಾಟಕ ಲೇಖಕಿಯರ ಸಂಘದ ಮನ್ನಣೆ

ಬೆಂಗಳೂರು : ಕರ್ನಾಟಕ ಲೇಖಕಿಯರ ಸಂಘದ ಪ್ರಸಕ್ತ ಸಾಲಿನ ಡಾ.ಅನುಪಮಾ ನಿರಂಜನ ಪ್ರಶಸ್ತಿಗೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಹಾಗೂ ಹಿರಿಯ ಲೇಖಕಿ ಗೀತಾ ನಾಗಭೂಷಣ್‌ ಅವರು ಆಯ್ಕೆಯಾಗಿದ್ದಾರೆ.

ಹೈದರಾಬಾದ್‌ ಕರ್ನಾಟಕ ಪ್ರದೇಶದ ಗೀತಾ, ಕಳೆದ ಹತ್ತು ವರ್ಷಗಳಲ್ಲಿ ಕನ್ನಡ ಕಾದಂಬರಿ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಗುರ್ತಿಸಿ ಪ್ರಶಸ್ತಿಯನ್ನು ನೀಡಲಾಗಿದೆ. ಗೀತಾ ನಾಗಭೂಷಣ ಅವರ ಇತ್ತೀಚಿನ ‘ಬದುಕು’ ಕಾದಂಬರಿಗೆ ಓದುಗರ ಮೆಚ್ಚುಗೆಗೆ ಪಾತ್ರವಾಗಿದೆ.

ಹತ್ತು ಸಾವಿರ ರೂ. ನಗದು ಹಾಗೂ ಫಲಕವನ್ನು ಒಳಗೊಂಡಿರುವ ಪ್ರಶಸ್ತಿಯನ್ನು ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ವಿತರಿಸುವುದಾಗಿ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಕೆ.ಉಷಾ ತಿಳಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X