ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಂಚ ತಿಂದ ಷರೀಫ್‌ಗೆ ಕಾಂಗ್ರೆಸ್‌ ಗೇಟ್‌ಪಾಸ್‌

By Staff
|
Google Oneindia Kannada News

ಲಂಚ ತಿಂದ ಷರೀಫ್‌ಗೆ ಕಾಂಗ್ರೆಸ್‌ ಗೇಟ್‌ಪಾಸ್‌
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ವಜಾಗೊಳಿಸಲು ಪ್ರತಿಪಕ್ಷಗಳ ಪಟ್ಟು

ಬೆಂಗಳೂರು : ಲಂಚ ಸ್ವೀಕರಿಸುವ ಸಮಯದಲ್ಲಿ ಲೋಕಾಯುಕ್ತರ ಬಲೆಗೆ ಸಿಕ್ಕಿ ಬಿದ್ದಿದ್ದ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಒಬೇದುಲ್ಲಾ ಷರೀಫ್‌ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಬುಧವಾರ ಅಮಾನತುಗೊಳಿಸಲಾಗಿದೆ.

ಪ್ರದೇಶ ಕಾಂಗ್ರೆಸ್‌ ಘಟಕ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸೂಚಿಸಿರುವುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್‌.ಕೆ.ರಾಥೋಡ್‌ ತಿಳಿಸಿದ್ದಾರೆ.

ಕೂಡಲೇ ಒಬೇದುಲ್ಲಾ ಷರೀಫ್‌ರನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಸದನದಲ್ಲಿ ಪ್ರತಿಪಕ್ಷಗಳು ಒತ್ತಾಯಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಒಬೇದುಲ್ಲಾ, ನನ್ನನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ನಡೆಸಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆಟೋರಿಕ್ಷಾಕ್ಕೆ ಸಾಲ ಮಂಜೂರಾತಿ ಸಂದರ್ಭದಲ್ಲಿ ಲಂಚ ಸ್ವೀಕರಿಸುತ್ತಿದ್ದ ಒಬೇದುಲ್ಲಾ ಅವರನ್ನು ಲೋಕಾಯುಕ್ತ ವೆಂಕಟಾಚಲ ಬಂಧಿಸಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X