ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂದ್‌ ಪ್ರವೀಣರಿಗೆ ಹೈಕೋರ್ಟ್‌ನ ನೋಟಿಸ್‌

By Staff
|
Google Oneindia Kannada News

ಬಂದ್‌ ಪ್ರವೀಣರಿಗೆ ಹೈಕೋರ್ಟ್‌ನ ನೋಟಿಸ್‌
ಸಿದ್ದರಾಮಯ್ಯ, ಯಡಿಯೂರಪ್ಪ, ಅನಂತ್‌ಕುಮಾರ್‌ರ ಬಂದ್‌ಗಳಿಂದ ಜನಜೀವನ ಅಸ್ತವ್ಯಸ್ತ : ಸಾ.ಹಿತಾಸಕ್ತಿ ಅರ್ಜಿ

ಬೆಂಗಳೂರು : ಪ್ರತಿಭಟನೆ ಮತ್ತು ಬಂದ್‌ಗಳ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡುವ ಪ್ರಕ್ರಿಯೆಯನ್ನು ತೀವ್ರವಾಗಿ ಖಂಡಿಸಿರುವ ಹೈಕೋರ್ಟ್‌, ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಯಡಿಯೂರಪ್ಪ ಮತ್ತು ಅನಂತಕುಮಾರ್‌ಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ.

ನ್ಯಾಯವಾದಿ ಎ.ವಿ.ಅಮರ್‌ನಾಥನ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರತಿಭಟನೆಗಳ ಮೂಲಕ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದವರ ಮೇಲೆ ಕೆಂಗಣ್ಣು ಬಿಟ್ಟಿದೆ.

ಕೇರಳ ಹೈಕೋರ್ಟ್‌ನ ಪೂರ್ಣ ಪೀಠವು ಬಂದ್‌ ನಡೆಸಲು ಅಥವಾ ಬಂದ್‌ಗೆ ಕರೆ ನೀಡಲು ರಾಜಕೀಯ ಪಕ್ಷಗಳಿಗೆ ಹಕ್ಕಿಲ್ಲ. ಸಾರ್ವಜನಿಕರಿಗೆ ತೊಂದರೆಯಾದರೇ ಅದಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ತಿಳಿಸಿದೆ. ಸುಪ್ರಿಂಕೋರ್ಟ್‌ ಈ ತೀರ್ಪನ್ನು ಎತ್ತಿಹಿಡಿದಿದೆ. ಹೀಗಾಗಿ ಪ್ರತಿಭಟನಾಕಾರರ ಮೇಲೆ ಕ್ರಮ ಜರುಗಿಸಬೇಕೆಂದು ಅರ್ಜಿದಾರರು ವಾದಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X