ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೂ ಮಾಫಿಯಾದತ್ತ ಧರ್ಮಸಿಂಗ್‌ ಮೆದು ಧೋರಣೆ

By Staff
|
Google Oneindia Kannada News

ಭೂ ಮಾಫಿಯಾದತ್ತ ಧರ್ಮಸಿಂಗ್‌ ಮೆದು ಧೋರಣೆ
5-20ಸಾವಿರ ಕೋಟಿ ಮೌಲ್ಯದ ಭೂಕಬಳಿಕೆ -ಹೆಚ್‌.ಡಿ.ಕುಮಾರಸ್ವಾಮಿ

ಬೆಳಗಾವಿ : ರಾಜಾಧಾನಿ ನಗರ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಳ್ಳು ದಾಖಲೆಗಳ ಸೃಷ್ಟಿಸಿ, ಕೋಟ್ಯಾಂತರ ರೂ. ಮೌಲ್ಯದ ಭೂಮಿಯನ್ನು ಕಬಳಿಸಿರುವ ಬಗ್ಗೆ ಸರ್ಕಾರ ಮೆದುಧೋರಣೆ ಅನುಸರಿಸುತ್ತಿದೆ ಎಂದು ಜೆಡಿಎಸ್‌ ಕಾರ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ದೂರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂ ಮಾಫಿಯಾ ವಿರುದ್ಧ ಕ್ರಮ ಜರುಗಿಸುವಂತೆ ಆರಂಭದಿಂದಲೂ ದೇವೇಗೌಡರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದಾರೆ. ಭರವಸೆಗಳ ಮೂಲಕ ಮುಖ್ಯಮಂತ್ರಿಗಳು ವಿಚಾರವನ್ನು ಬದಿಗೆ ಸರಿಸಿದ್ದಾರೆ ಎಂದರು.

ಭೂ ಮಾಫಿಯಾ ವಿರುದ್ಧ ಕಠಿಣ ಕ್ರಮ ಕೈಗೊಂಡರೇ, 15ರಿಂದ 20ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಸರ್ಕಾರಕ್ಕೆ ಮತ್ತೆ ದಕ್ಕುತ್ತದೆ. ಅಭಿವೃದ್ಧಿ ಕೆಲಸಗಳಿಗೆ ಸಾಲ ಎತ್ತುವ ಬದಲು ಈ ಕ್ರಮಕ್ಕೆ ಮುಖ್ಯಮಂತ್ರಿಗಳು ಮುಂದಾಗಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X