ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಯಲಲಿತಾಗೆ ವಿಶೇಷ ಕೋರ್ಟ್‌ನಿಂದ ತಾಕೀತು

By Staff
|
Google Oneindia Kannada News

ಜಯಲಲಿತಾಗೆ ವಿಶೇಷ ಕೋರ್ಟ್‌ನಿಂದ ತಾಕೀತು
ಅಕ್ರಮ ಆಸ್ತಿ ಗಳಿಗೆ ಪ್ರಕರಣದ ವಿಚಾರಣೆ ಮೇ 9ಕ್ಕೆ ಮುಂದೂಡಿಕೆ

ಬೆಂಗಳೂರು : 66.65ಕೋಟಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಹಾಗೂ ಇತರರು ನ್ಯಾಯಾಲಯಕ್ಕೆ ಗೈರು ಹಾಜರಾಗುತ್ತಿರುವ ಬಗ್ಗೆ ವಿಶೇಷ ನ್ಯಾಯಾಲಯ ತೀವ್ರ ಆಕ್ಷೇಪ ವ್ಯಕ್ತಪಡಿ ಸಿತು.ಅಲ್ಲದೇ ಪೂರಕ ಕಾರಣ ಒದಗಿಸದೆ ಮುಂದಿನ ವಿಚಾರಣೆಗೆ ಗೈರು ಹಾಜರಾಗದಂತೆ ನ್ಯಾಯಾಲಯ ತಾಕೀತು ಮಾಡಿದೆ.

ಆರೋಪಿಗಳ ಪರ ವಕೀಲರು, ಜಯಲಲಿತಾ ಅವರ ಕಾನೂನು ಸಲಹೆಗಾರ ಎನ್‌.ಜ್ಯೋತಿ ಅವರನ್ನು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಾಗಿ ವಿಚಾರಣೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು.

ಆರೋಪಿಗಳ ಗೈರು ಹಾಜರಿಯಿಂದ ಪದೇಪದೇ ವಿಚಾರಣೆಯನ್ನು ಮುಂದೂಡುತ್ತಿರುವುದರಿಂದ ನ್ಯಾಯಾಲಯದ ಅಮೂಲ್ಯ ಸಮಯ ವ್ಯರ್ಥವಾಗುತ್ತಿದೆ ಎಂದು ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಮೂರ್ತಿ ಎ.ಎಸ್‌.ಪಚ್ಚಾಪುರೆ, ಮುಂದಿನ ವಿಚಾರಣೆಯನ್ನು ಮೇ.9ಕ್ಕೆ ಮುಂದೂಡುತ್ತಿರುವುದಾಗಿ ತಿಳಿಸಿದರು.
(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X