ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್‌ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

By Staff
|
Google Oneindia Kannada News

ಬೀದರ್‌ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ
72ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದಿಂದ 50ಲಕ್ಷ ಮಂಜೂರು-ಗುರುಪಾದಪ್ಪ ನಾಗಮಾರಪಲ್ಲಿ

ಬೀದರ್‌ : ಮೇ ತಿಂಗಳಲ್ಲಿ ನಡೆಯಬೇಕಿದ್ದ 72ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಿದ್ದು, ಸದ್ಯದಲ್ಲಿಯೇ ಹೊಸ ದಿನಾಂಕಗಳನ್ನು ಪ್ರಕಟಿಸುವುದಾಗಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಂದ್ರಶೇಖರ್‌ ಪಾಟೀಲ್‌ ಮತ್ತು ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಅರಣ್ಯ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಯ ಮತ್ತು ಹಣದ ಅಭಾವದಿಂದ ಸಮ್ಮೇಳನದ ಸಿದ್ಧತೆಗಳು ನಿಗದಿಯಂತೆ ನಡೆಯಲಿಲ್ಲ. ಹೀಗಾಗಿ ಸಮ್ಮೇಳನದ ದಿನಾಂಕವನ್ನು ಮುಂದಕ್ಕೆ ಹಾಕಲಾಯಿತು ಎಂದರು.

ರಾಜ್ಯ ಸರ್ಕಾರ ಸಮ್ಮೇಳನಕ್ಕಾಗಿ 50ಲಕ್ಷ ರೂ.ಗಳನ್ನು ಮಂಜೂರು ಮಾಡಿದೆ. ಆದರೆ ಹಣ ಸಕಾಲದಲ್ಲಿ ಬಿಡುಗಡೆ ಮಾಡುವಲ್ಲಿ ಸ್ವಲ್ಪ ತಡವಾಗಿದೆ. ಮುಂದಿನ ಮೂರುನಾಲ್ಕು ದಿನಗಳಲ್ಲಿ ಹಣ ಬಿಡುಗಡೆಯಾಗಲಿದೆ. ಅಲ್ಲದೇ ಸರ್ಕಾರಿ ನೌಕರರ ಒಂದು ದಿನದ ವೇತನವನ್ನು ಸಮ್ಮೇಳನಕ್ಕೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದರು.
(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X