ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ

By Staff
|
Google Oneindia Kannada News

ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ
ಶ್ರೀ ಶಿವಕುಮಾರ ಸ್ವಾಮಿಗಳ 98ನೇ ಜನ್ಮಜಯಂತಿ ಆಚರಣೆಗೆ ತುಮಕೂರು ಸಜ್ಜು

ತುಮಕೂರು : ತ್ರಿವಿಧ ದಾಸೋಹ ಮೂರ್ತಿ ಮತ್ತು ನಡೆದಾಡುವ ದೇವರೆಂದೇ ಕರೆಯಲ್ಪಡುವ ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮಿಗಳ 98ನೇ ಜನ್ಮದಿನೋತ್ಸವದ ಅಂಗವಾಗಿ ಗುರುವಂದನಾ ಮತ್ತು ಅಮೃತ ಮಹೋತ್ಸವ ಕಾರ್ಯಕ್ರಮ ಭಾನುವಾರ(ಏ.24) ಆರಂಭಗೊಳ್ಳಲಿದೆ.

ಸಿದ್ಧಗಂಗಾ ಮಠದಲ್ಲಿ ಏ.24 ಮತ್ತು ಏ.25ರಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಈಗಾಗಲೇ ತುಮಕೂರಿನತ್ತ ಭಕ್ತರ ಪ್ರವಾಹ ಹರಿದು ಬರುತ್ತಿದೆ. ಕಾರ್ಯಕ್ರಮದಲ್ಲಿ ಸುಮಾರು ನಾಲ್ಕು ಲಕ್ಷ ಮಂದಿ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ. ಒಂಬತ್ತು ಸ್ಥಳಗಳಲ್ಲಿ ದಾಸೋಹಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಗುರು ವಂದನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾಹಿತ್ಯ ಸಮ್ಮೇಳನ, ಧರ್ಮಸಮ್ಮೇಳನ, ಮಹಿಳಾ ಸಮ್ಮೇಳನ, ರೈತ ಸಮ್ಮೇಳನಗಳನ್ನು ಅಯೋಜಿಸಲಾಗಿದೆ. ಅಮೃತ ಮಹೋತ್ಸವದ ನಂತರ ಮುಂಬರುವ 24 ತಿಂಗಳುಗಳಲ್ಲಿ ರಾಜ್ಯದ ಎಲ್ಲೆಡೆ ಶ್ರೀಗಳ ಗುರುವಂದನಾ ಕಾರ್ಯಕ್ರಮವನ್ನು ಏರ್ಪಡಿಸಲು ಸಿದ್ಧತೆಗಳು ನಡೆದಿವೆ.

ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸುತ್ತಿದ್ದಾರೆ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮಿ, ಬೀರೇಂದ್ರ ಕೇಶವ ತಾರಕಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ.

ಕೇಂದ್ರಗೃಹ ಸಚಿವ ಶಿವರಾಜ ಪಾಟೀಲ್‌ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ಅಧ್ಯಕ್ಷತೆವಹಿಸುವರು. ಕೇಂದ್ರ ಮಾಜಿ ರಕ್ಷಣಾ ಸಚಿವ ಜಾರ್ಜ್‌ ಫರ್ನಾಂಡಿಸ್‌ ಪ್ರಧಾನ ಭಾಷಣ ಮಾಡುವರು.

ಕಿರಿಯ ಶ್ರೀಗಳಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ, ಶ್ರೀ ಬಾಲಗಂಗಾಧರ ಸ್ವಾಮೀಜಿ, ಸಚಿವ ಎಂ.ಪಿ. ಪ್ರಕಾಶ್‌, ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಳ್ಳುವರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X