ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರೊ.ಜಿ.ವೆಂಕಟಸುಬ್ಬಯ್ಯ ಅವರಿಗೆ ಮಾಸ್ತಿ ಪ್ರಶಸ್ತಿಯ ಗರಿ

By Staff
|
Google Oneindia Kannada News

ಪ್ರೊ.ಜಿ.ವೆಂಕಟಸುಬ್ಬಯ್ಯ ಅವರಿಗೆ ಮಾಸ್ತಿ ಪ್ರಶಸ್ತಿಯ ಗರಿ
ಜೂನ್‌.19ರಂದು ಪ್ರಶಸ್ತಿ ವಿತರಣೆ -ಮಾವಿನಕೆರೆ ರಂಗನಾಥ್‌

ಬೆಂಗಳೂರು : ಇಗೋ ಕನ್ನಡ ಖ್ಯಾತಿಯ ಹಿರಿಯ ವಿದ್ವಾಂಸ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು 2005ನೇ ಸಾಲಿನ ಪ್ರತಿಷ್ಠಿತ ಮಾಸ್ತಿ ಪ್ರಶಸ್ತಿ ಗೆ ಆಯ್ಕೆಗೊಂಡಿದ್ದಾರೆ.

ಸಾಹಿತಿ ಮಾವಿನಕೆರೆ ರಂಗನಾಥ್‌ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿ ವೆಂಕಟಸುಬ್ಬಯ್ಯ ಅವರ ಸೇವೆಯನ್ನು ಗುರ್ತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು 25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ. ಜೂನ್‌ 19ರಂದು ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ.

ಕನ್ನಡ ಉಪನ್ಯಾಸಕರಾಗಿ, ಪ್ರಾಧ್ಯಾಪಕರಾಗಿ ಹಾಗೂ ಪ್ರಾಂಶುಪಾಲರಾಗಿ ಶಿಕ್ಷಣ ಕ್ಷೇತ್ರದಲ್ಲಿ 45 ವರ್ಷಗಳಷ್ಟು ಸುದೀರ್ಘ ಸೇವೆ ಸಲ್ಲಿಸಿರುವ ವೆಂಕಟಸುಬ್ಬಯ್ಯ, ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸುವಲ್ಲಿ ಶ್ರಮಿಸುತ್ತಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X