ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಡ ಹಿತಕ್ಕಾಗಿ ತುರ್ತು ಅಧಿವೇಶನಕ್ಕೆ ಬಿಜೆಪಿ ಆಗ್ರಹ

By Staff
|
Google Oneindia Kannada News

ನಾಡ ಹಿತಕ್ಕಾಗಿ ತುರ್ತು ಅಧಿವೇಶನಕ್ಕೆ ಬಿಜೆಪಿ ಆಗ್ರಹ
ಧರಂ ನಿರ್ಲಕ್ಷ್ಯ ಮುಂದುವರೆದರೆ ವಿಧಾನ ಸೌಧದ ಎದುರು ಧರಣಿ -ಬಿ.ಎಸ್‌.ಯಡಿಯೂರಪ್ಪ

ಬೆಂಗಳೂರು : ಕಾವೇರಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಮತ್ತು ಭೂಹಗರಣದ ಬಗ್ಗೆ ಸಮಗ್ರ ಚರ್ಚೆ ನಡೆಸಲು ಮೂರು ದಿನಗಳ ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯ ಸರ್ಕಾರವನ್ನು ಪ್ರತಿಪಕ್ಷವಾದ ಬಿಜೆಪಿ ಆಗ್ರಹಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ಪ್ರಮುಖ ವಿದ್ಯಮಾನಗಳನ್ನು ಚರ್ಚಿಸಲಾಗಿದೆ. ರಾಜ್ಯದ ಹಿತಕಾಯುವ ನಿಟ್ಟಿನಲ್ಲಿ ವಿಶೇಷ ಅಧಿವೇಶನಕ್ಕೆ ಸರ್ಕಾರ ಚಾಲನೆ ನೀಡದಿದ್ದರೆ, ಮೇ 9ರಂದು ವಿಧಾನಸೌಧದ ಎದುರು ಬಿಜೆಪಿ ಧರಣಿ ನಡೆಸಲಿದೆ ಎಂದರು.

ಆಂಧ್ರ ಪ್ರದೇಶ ಸುಪ್ರಿಂ ಕೋರ್ಟ್‌ನ 2000ದ ಆದೇಶವನ್ನು ಉಲ್ಲಂಘಿಸಿ ಕೈಗೆತ್ತಿಕೊಂಡಿರುವ ಅಕ್ರಮ ಕಾಮಗಾರಿಗಳ ವಿರುದ್ಧ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಗೊತ್ತುವಳಿ ಮಂಡಿಸಬೇಕೆಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.
(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X