ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಪ್ರಿಂಕೋರ್ಟ್‌ ಅಂಗಳಕ್ಕೆ ಕಾರಿಡಾರ್‌ ಕಿತಾಪತಿ

By Staff
|
Google Oneindia Kannada News

ಸುಪ್ರಿಂಕೋರ್ಟ್‌ ಅಂಗಳಕ್ಕೆ ಕಾರಿಡಾರ್‌ ಕಿತಾಪತಿ
ಮುಂದಿನ ಒಂದೆರಡು ದಿನಗಳಲ್ಲಿ ಕರ್ನಾಟಕ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಮೇಲ್ಮನವಿ

ಬೆಂಗಳೂರು : ಬೆಂಗಳೂರು-ಮೈಸೂರು ಕಾರಿಡಾರ್‌ ಯೋಜನೆ(ಬಿಎಂಐಸಿ)ಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ, ಸುಪ್ರಿಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೈಕೋರ್ಟ್‌ ಆದೇಶದ ಮುಖಭಂಗದಿಂದ ಪಾರಾಗಲು ನ್ಯಾಯಾಂಗ ಹೋರಾಟವನ್ನು ಸರ್ಕಾರ ಮುಂದುವರೆಸುತ್ತಿದೆ. ಈ ಸಂಬಂಧ ಮೇಲ್ಮನವಿ ಸಲ್ಲಿಕೆಗಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ಕೆ. ಮಿಶ್ರಾ ನೇತೃತ್ವದ ಉನ್ನತ ಅಧಿಕಾರಿಗಳ ತಂಡ ದೆಹಲಿಯಲ್ಲಿ ಬೀಡು ಬಿಟ್ಟಿದೆ. ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಸ್‌.ವಿ.ರಂಗನಾಥ್‌, ಬಿ.ಎ.ಹರೀಶ್‌ ಗೌಡ, ಎಂ.ಶಿವಲಿಂಗಸ್ವಾಮಿ ಮತ್ತಿತರ ಅಧಿಕಾರಿಗಳು ತಂಡದಲ್ಲಿದ್ದಾರೆ.

ಮುಖ್ಯ ಕಾರ್ಯದರ್ಶಿಗಳ ಪರವಾಗಿ ಸುಪ್ರಿಂಕೋರ್ಟ್‌ನಲ್ಲಿ ಹಿರಿಯ ನ್ಯಾಯವಾದಿ ಸೋಲಿ ಸೊರಾಬ್ಜಿ, ರಾಜ್ಯ ಸರ್ಕಾರದ ಪರವಾಗಿ ಅಡ್ವೋಕೇಟ್‌ ಜನರಲ್‌ ಬಿ.ಟಿ.ಪಾರ್ಥಸಾರಥಿ ವಾದ ಮಂಡಿಸುವ ಸಾಧ್ಯತೆಗಳಿವೆ. ನಂದಿ ಕಂಪನಿ ಪರವಾಗಿ ಹೈಕೋರ್ಟ್‌ನಲ್ಲಿ ಗೆಲುವು ಸಾಧಿಸಿದ ದುಶ್ಯಂತ್‌ ದವೇ ಅವರೇ ಸುಪ್ರಿಂಕೋರ್ಟ್‌ನಲ್ಲಿ ವಾದ ಮುಂದುವರೆಸುವರು.
(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X