ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌. ಬಂಗಾರಪ್ಪ ಸೋತರೆ ಕುಮಾರನಿಗೆ ಸಂಭ್ರಮ

By Staff
|
Google Oneindia Kannada News

ಎಸ್‌. ಬಂಗಾರಪ್ಪ ಸೋತರೆ ಕುಮಾರನಿಗೆ ಸಂಭ್ರಮ
ಅಪ್ಪ ರಾಜಕೀಯ ನಿವೃತ್ತಿ ಪಡೆದು ಯುವಕರಿಗೆ ಮಾರ್ಗದರ್ಶನ ನೀಡಲಿ -ಕುಮಾರ್‌ ಬಂಗಾರಪ್ಪ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಅಪ್ಪ ಸೋತರೆ ನಮಗೆ ಖುಷಿ. ಏಕೆಂದರೆ ಅವರು ಮತ್ತೆ ಕುಟುಂಬಕ್ಕೆ ದೊರಕುತ್ತಾರೆ. ಒಡೆದು ಹೋಗಿರುವ ನಮ್ಮ ಕುಟುಂಬ ಒಂದಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಪುತ್ರ ಮತ್ತು ಶಾಸಕ ಕುಮಾರ್‌ ಬಂಗಾರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಲ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಸ್ಪರ್ಧೆ ಏರ್ಪಡಲಿದೆ. ಸಮಾಜವಾದಿ ಪಕ್ಷ ಮೂರನೇ ಸ್ಥಾನಕ್ಕೆ ಹಾಗೂ ಜೆಡಿಎಸ್‌ ನಾಲ್ಕನೇ ಸ್ಥಾನಕ್ಕೆ ಸಮಾಧಾನಪಡುವುದು ಅನಿವಾರ್ಯ. ಬಂಗಾರಪ್ಪ ರಾಜಕೀಯ ನಿವೃತ್ತಿ ಪಡೆದು ಯುವಕರಿಗೆ ಅವಕಾಶ ಕಲ್ಪಿಸಬೇಕು ಎಂದರು.

ಬಂಗಾರಪ್ಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವೇ ಇಲ್ಲ. ಹಿಂದಿನ ಸಮಾಜವಾದಿ ಪಕ್ಷಕ್ಕೂ, ಇಂದಿನ ಸಮಾಜವಾದಿ ಪಕ್ಷಕ್ಕೂ ಸಾಕಷ್ಟು ವ್ಯತ್ಯಾಸಗಳಿವೆ. ಯಾರು ಏನೇ ತಂತ್ರ ಹೂಡಿದರು ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಶತಸಿದ್ಧ ಎಂದು ಕುಮಾರ್‌ ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X