ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆರಿಟಾಲ ರವಿ ಕ್ಷೇತ್ರದಲ್ಲಿ ಚುನಾವಣೆಗೆ ಮುನ್ನವೇ 7 ಬಲಿ

By Staff
|
Google Oneindia Kannada News

ಪೆರಿಟಾಲ ರವಿ ಕ್ಷೇತ್ರದಲ್ಲಿ ಚುನಾವಣೆಗೆ ಮುನ್ನವೇ 7 ಬಲಿ
ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಚಂದ್ರಬಾಬು ನಾಯ್ಡು ಒತ್ತಾಯ

ಹೈದರಾಬಾದ್‌ : ಅನಂತಪುರ ಜಿಲ್ಲೆಯ ಪೆನುಕೊಂಡ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಕ್ರಿಯೆ ಶುಕ್ರವಾರ ಹಿಂಸೆಗೆ ತಿರುಗಿ ಏಳುಮಂದಿ ಸಾವನ್ನಪ್ಪಿದ್ದು, ಮೂವತ್ತೆಂಟು ಮಂದಿ ಗಾಯಗೊಂಡಿದ್ದಾರೆ.

ಈ ಘಟನೆಯಲ್ಲಿ ಆರು ಮಂದಿ ಟಿಡಿಪಿ ಕಾರ್ಯಕರ್ತರು ಹಾಗೂ ಒಬ್ಬ ಸಹಾಯಕ ಸಬ್‌ಇನ್ಸ್‌ಪೆಕ್ಟರ್‌ ಮೃತಪಟ್ಟಿದ್ದು, ಪೆನುಕೊಂಡದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಟಿಡಿಪಿ ಅಭ್ಯರ್ಥಿ ಪೆರಿಟಾಲ ಸುನೀತಾ(ಪೆರಿಟಾಲ ರವಿ ಅವರ ಪತ್ನಿ)ನಾಮಪತ್ರ ಸಲ್ಲಿಸಲು ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಟಿಡಿಪಿ ಕಾರ್ಯಕರ್ತರ ಕಲ್ಲು ತೂರಾಟಕ್ಕೆ ಪ್ರತಿಯಾಗಿ ಪೊಲೀಸರು ಗುಂಡುಹಾರಿಸಿದ್ದಾರೆಂದು ವರದಿಯಾಗಿದೆ.

ಪೊಲೀಸರು ಮೊದಲು ಲಾಠೀ ಚಾರ್ಜ್‌ ಮೂಲಕ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದರು. ಅದು ಸಾಧ್ಯವಾಗದಿದ್ದಾಗ ಫೈರಿಂಗ್‌ ಮಾಡಬೇಕಾಯಿತು ಎಂದು ಸ್ಥಳಕ್ಕೆ ಭೇಟಿ ನೀಡಿರುವ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಸ್ವರಂಜಿತ್‌ ಸೇನ್‌ ಸುದ್ದಿಗಾರರಿಗೆ ತಿಳಿಸಿದರು.

ದೌರ್ಜನ್ಯ : ಘಟನೆಯನ್ನು ಖಂಡಿಸಿರುವ ಪ್ರತಿಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕಾಂಗ್ರೆಸ್‌ ಸರ್ಕಾರ ಟಿಡಿಪಿ ಕಾರ್ಯಕರ್ತರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸುತ್ತಿದೆ. ಈ ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X