ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಸಂಪುಟ ವಿಸ್ತರಣೆಗೆ ಚಾಲನೆ : ಧರಂ ಪ್ರಕಟಣೆ

By Staff
|
Google Oneindia Kannada News

ರಾಜ್ಯ ಸಂಪುಟ ವಿಸ್ತರಣೆಗೆ ಚಾಲನೆ : ಧರಂ ಪ್ರಕಟಣೆ
ಹುಕ್ಕೇರಿ, ಮೋರೆ, ಹೊನ್ನಳ್ಳಿಮತ್ತು ಸೇಠ್‌ಗೆ ಕೊಕ್‌ ಸಂಭವ : ಪ್ರಬಲರ ಆಗಮನದ ನಿರೀಕ್ಷೆ

ಬೆಂಗಳೂರು : ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ-ಮಂಡಳಿ ಮತ್ತು ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಧರ್ಮಸಿಂಗ್‌ ಚಾಲನೆ ನೀಡಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬುಧವಾರ ದೆಹಲಿಯಲ್ಲಿ ಭೇಟಿಮಾಡಿ ಹಿಂತಿರುಗಿದ ಧರ್ಮಸಿಂಗ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು.

ನಿಗಮ-ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿರುವ ಎಲ್ಲ ಮುಖಂಡರಿಗೂ ತಕ್ಷಣ ರಾಜೀನಾಮೆ ನೀಡಲು ಸೂಚಿಸಲಾಗಿದೆ. ಜೆ ಡಿ ಎಸ್‌ ಮುಖಂಡರ ಜೊತೆ ಚರ್ಚಿಸಿ ಮಹಾರಾಷ್ಟ್ರ ಮಾದರಿಯಲ್ಲಿ ನೇಮಕ ಮಾಡಲಾಗುವುದು. ಜೂನ್‌ 30 ರಿಂದ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮೊದಲು ವಿಸ್ತರಣೆ ಆಗಬಹುದು ಎಂದು ಹೇಳಿದರು.

ಕೃಷಿ ಮಾರುಕಟ್ಟೆ ಸಚಿವ ಪ್ರಕಾಶ್‌ ಹುಕ್ಕೇರಿ, ಪೌರಾಡಳಿತ ಸಚಿವ ಮೋರೆ, ಯುವಜನಸೇವೆ ಮತ್ತು ಕ್ರೀಡಾ ಖಾತೆ ಸಚಿವ ಜಬ್ಬಾರ್‌ಖಾನ್‌ ಹೊನ್ನಳ್ಳಿ, ಕಾರ್ಮಿಕ ಮತ್ತು ಹಜ್‌ ಖಾತೆ ಸಚಿವ ತನ್ವೀರ್‌ ಸೇಠ್‌ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದ್ದು, ಕೆಲವು ಪ್ರಬಲ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಂಭವವಿದೆ.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X