ಕಾಂಗ್ರೆಸ್ನಿಂದ ಜನತಂತ್ರದ ಕಗ್ಗೊಲೆ -ಅಡ್ವಾಣಿ
ಕಾಂಗ್ರೆಸ್ನಿಂದ
ಜನತಂತ್ರದ
ಕಗ್ಗೊಲೆ
-ಅಡ್ವಾಣಿ
ತುರ್ತು
ಪರಿಸ್ಥಿತಿಯ
30ನೇ
ವರ್ಷದ
ಕರಾಳ
ದಿನ
ಆಚರಣೆ
ತುರ್ತು ಪರಿಸ್ಥಿತಿ ಜಾರಿಯಾಗಿ 30 ವರ್ಷ ಕಳೆದ ಹಿನ್ನೆಲೆಯಲ್ಲಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಪ್ರಜಾತಂತ್ರ ಉಳಿಸಿ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.
ಕಾಂಗ್ರೆಸ್ಸೇತರ ಸರ್ಕಾರಗಳು ರಚನೆ ಆಗಬಾರದೆಂಬ ಉದ್ದೇಶದಿಂದ ರಾಜ್ಯಪಾಲರ ಮೂಲಕ ಜನತಂತ್ರ ವ್ಯವಸ್ಥೆಯ ಕಗ್ಗೊಲೆ ಮಾಡಲಾಗುತ್ತಿದೆ. ಕಾಂಗ್ರೆಸ್ನ ವಂಶ ಪಾರಂಪರ್ಯ ಆಡಳಿತದ ವಿರುದ್ಧ ಸಂಘಟಿತ ಹೋರಾಟ ಮಾಡಬೇಕಾಗಿದೆ ಎಂದು ಕರೆನೀಡಿದರು.
ಇಂದಿರಾಗಾಂಧಿ ಜಾರಿಗೆ ತಂದಿದ್ದ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಬೆಂಗಳೂರಿನ ಕಾರಾಗೃಹದಲ್ಲಿ 19ತಿಂಗಳು ಕಳೆದ ಸೆರೆವಾಸವನ್ನು ಆಡ್ವಾಣಿ ಮೆಲುಕು ಹಾಕಿದರು. ಸಂಘ ಪರಿವಾರದೊಂದಿಗಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸುವ ನಿಟ್ಟಿನಲ್ಲಿ, ಆರೆಸ್ಸೆಸ್ ಸೇವೆಯನ್ನು ಅವರು ಈ ಸಂದರ್ಭದಲ್ಲಿ ಶ್ಲಾಘಿಸಿದರು.
ಸಮಾವೇಶದಲ್ಲಿ ಎನ್ಡಿಎ ಸಂಚಾಲಕ ಜಾರ್ಜ್ ಫರ್ನಾಂಡಿಸ್, ಬಿಜೆಪಿ ಉಪಾಧ್ಯಕ್ಷ ವೆಂಕಯ್ಯ ನಾಯ್ಡು, ಅನಂತ ಕುಮಾರ್, ಪೇಜಾವರ ಮಠಾಧೀಶ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು