ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೈಲ ದರ ಹೆಚ್ಚಳ ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ

By Staff
|
Google Oneindia Kannada News

ತೈಲ ದರ ಹೆಚ್ಚಳ ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ
ಯುಪಿಎ ಸರ್ಕಾರದ ವಿರುದ್ಧ ಎಡಪಕ್ಷಗಳು ಕರೆ ನೀಡಿದ್ದ ರಾಷ್ಟ್ರ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು : ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಳ ವಿರೋಧಿಸಿ ಎಡಪಕ್ಷಗಳು ಮಂಗಳವಾರ ಕರೆ ನೀಡಿದ್ದ ಪ್ರತಿಭಟನೆಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಜಧಾನಿ ನಗರದಲ್ಲಿ ನಡೆದ ರ್ಯಾಲಿಯಲ್ಲಿ, ಎತ್ತಿನ ಗಾಡಿಯ ಮೇಲೆ ಆಟೋ ರಿಕ್ಷಾ ಮತ್ತು ದ್ವಿಚಕ್ರವಾಹನಗಳನ್ನು ಹೇರಿಕೊಂಡು ಹೊರಟ ಮೆರವಣಿಗೆ ಸಾಂಕೇತಿಕವಾಗಿ ಇಂಧನ ದರ ಹೆಚ್ಚಳದ ಪರಿಸ್ಥಿತಿಯನ್ನು ಬಿಂಬಿಸಿತ್ತು.

ಪ್ರತಿಭಟನಾಕಾರರು ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನಗಳನ್ನು ತಳ್ಳಿಕೊಂಡು ಸಾಗಿ, ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯ ವಿರುದ್ಧ ಈ ಸಂದರ್ಭದಲ್ಲಿ ಘೋಷಣೆಗಳನ್ನು ಕೂಗಲಾಯಿತು.

ಎಡ ಪಕ್ಷಗಳ ಅಸ್ತಿತ್ವ ಅಷ್ಟಾಗಿ ರಾಜ್ಯದಲ್ಲಿ ಇಲ್ಲದಿರುವುದರಿಂದ, ಸಿಪಿಐ ಮತ್ತು ಸಿಪಿಎಂ ಪಕ್ಷದ ಕಾರ್ಯಕರ್ತರೇ ಹೆಚ್ಚಾಗಿ ಪ್ರತಿಭಟನೆಯಲ್ಲಿ ಕಂಡು ಬಂದರು. ಮೈಸೂರು, ತುಮಕೂರು, ಕೋಲಾರ, ಉಡುಪಿ, ಕುಂದಾಪುರ ಮತ್ತು ರಾಜ್ಯದ ಅನೇಕ ಕಡೆಗಳಲ್ಲಿ ಪ್ರತಿಭಟನೆ ನಡೆಸಿರುವುದಾಗಿ ಸಿಪಿಎಂ ವಕ್ತಾರರು ಸುದ್ದಿಗಾರರಿಗೆ ತಿಳಿಸಿದ್ದಾರೆ.

(ಪಿಟಿಐ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X