ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯಕ್ಕೆ ಸಿಹಿಸುದ್ದಿ

By Staff
|
Google Oneindia Kannada News

ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯಕ್ಕೆ ಸಿಹಿಸುದ್ದಿ
ಕೆನರಾಬ್ಯಾಂಕ್‌ ಶತಮಾನೋತ್ಸವ ಸಮಾರಂಭದಲ್ಲಿ ಪಿ.ಚಿದಂಬರಂ, ಧರ್ಮಸಿಂಗ್‌, ಎಂ.ಬಿ.ಎನ್‌.ರಾವ್‌...

ಬೆಂಗಳೂರು : ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ‘ವಿಶೇಷ ಸಾಲ ಯೋಜನೆ’ಯನ್ನು ಸಿದ್ಧಪಡಿಸಿದೆ. ಜುಲೈನಲ್ಲಿಯೇ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ಎಂದು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಹೇಳಿದರು.

ನಗರದಲ್ಲಿ ಕೆನರಾ ಬ್ಯಾಂಕ್‌ನ ಶತಮಾನೋತ್ಸವ ವರ್ಷಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ವರ್ಷ ಜುಲೈನಲ್ಲಿ ಕೃಷಿ ವಲಯಕ್ಕೆ ಸಾಲ ಸೌಲಭ್ಯ ಘೋಷಿಸಿದ ಮಾದರಿಯಲ್ಲಿಯೇ ಕೈಗಾರಿಕಾ ವಲಯವನ್ನು ಬೆಂಬಲಿಸಲು ಸರ್ಕಾರ ಮುಂದಾಗಿದೆ ಎಂದರು.

ವಿದ್ಯಾರ್ಥಿಗಳಿಗೆ ಸಾಲ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉದ್ದೇಶಕ್ಕಾಗಿ ಸಾಲ ನೀಡಲು ಸರ್ಕಾರ ಬದ್ಧವಾಗಿದೆ. ಮುಂದಿನ ವರ್ಷ ಸಾಲದ ಪ್ರಮಾಣವನ್ನು ಹೆಚ್ಚಿಸಲಾಗುವುದು. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌, ಕೆನರಾಬ್ಯಾಂಕ್‌ ಮುಖ್ಯಸ್ಥ ಎಂ.ಬಿ.ಎನ್‌.ರಾವ್‌ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X