ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನಪ್ಪ ಗೌಡ, ಜಯಶೀಲಗೆ ತುಳು ಅಕಾಡೆಮಿ ಪ್ರಶಸ್ತಿ

By Staff
|
Google Oneindia Kannada News

ಚಿನ್ನಪ್ಪ ಗೌಡ, ಜಯಶೀಲಗೆ ತುಳು ಅಕಾಡೆಮಿ ಪ್ರಶಸ್ತಿ
ಸೆಪ್ಟೆಂಬರ್‌ 11ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ

ಮಂಗಳೂರು : 2004ನೇ ಸಾಲಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಡಾ.ಕೆ.ಚಿನ್ನಪ್ಪ ಗೌಡ, ಶ್ರೀಮತಿ ಜಯಶೀಲ ಮತ್ತು ಲೋಕಯ ಪಂಬದ ಅವರಿಗೆ ಪ್ರಶಸ್ತಿ ಸಂದಿದೆ.

ತುಳು ಸಾಹಿತ್ಯ ಮತ್ತು ಸಂಶೋಧನೆ ವಿಭಾಗದಲ್ಲಿ ಆಯ್ಕೆಗೊಂಡಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರ ಪ್ರಾಧ್ಯಾಪಕರಾಗಿರುವ ಚಿನ್ನಪ್ಪ ಗೌಡ, ಭೂತಾರಾಧನೆ ಕೆಲವು ಅಧ್ಯಯನಗಳು, ಜಾಲಾಟ, ಸಂಸ್ಕೃತಿ ಸಿರಿ, ರತ್ನಮಾನಸ ಸೇರಿದಂತೆ 20ಕ್ಕೂ ಅಧಿಕ ಪುಸ್ತಕಗಳನ್ನು ರಚಿಸಿದ್ದಾರೆ.

ತುಳು ರಂಗಭೂಮಿ ಮತ್ತು ಸಿನಿಮಾ ವಿಭಾಗದ ಪ್ರಶಸ್ತಿಗೆ ಆಯ್ಕೆಯಾಗಿರುವ ಶ್ರೀಮತಿ ಜಯಶೀಲ ಅವರು, 1972ರಿಂದ ರಂಗಭೂಮಿ ನಟಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿರುವ ಲೋಕಯ ಪಂಬದ ಅವರು, ಭೂತಕಟ್ಟುವ ಕಾಯಕದಲ್ಲಿ ಗುರ್ತಿಸಿಕೊಂಡಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್‌ 11ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.
(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X