ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರವಣಬೆಳಗೊಳಕ್ಕೆ ಅಕ್ಟೋಬರ್‌ನಿಂದ ರೈಲು -ರೇವಣ್ಣ

By Staff
|
Google Oneindia Kannada News

ಶ್ರವಣಬೆಳಗೊಳಕ್ಕೆ ಅಕ್ಟೋಬರ್‌ನಿಂದ ರೈಲು -ರೇವಣ್ಣ
2006ರ ಬಾಹುಬಲಿ ಮಹಾಮಸ್ತಾಕಾಭಿಷೇಕಕ್ಕೆ ಭರದ ಸಿದ್ಧತೆ

ಬೆಂಗಳೂರು : ಹಾಸನ-ಶ್ರವಣಬೆಳಗೊಳ ನಡುವಿನ ರೈಲು ಮಾರ್ಗದ ಕಾಮಗಾರಿ ಸೆಪ್ಟೆಂಬರ್‌ನಲ್ಲಿ ಮುಕ್ತಾಯವಾಗಲಿದ್ದು, ಬೆಂಗಳೂರಿನಿಂದ ಶ್ರವಣಬೆಳಗೊಳಕ್ಕೆ ರೈಲು ಸೇವೆ ಅಕ್ಟೋಬರ್‌ನಿಂದ ಆರಂಭಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2006ರಲ್ಲಿ ಶ್ರವಣಬೆಳಗೊಳದಲ್ಲಿ ನಡೆಯಲಿರುವ ಬಾಹುಬಲಿ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ 166 ಕಿ.ಮೀ. ವ್ಯಾಪ್ತಿಯ ಈ ಕಾಮಗಾರಿ ತ್ವರಿತವಾಗಿ ನಡೆದಿದೆ ಎಂದರು.

ಅದೇ ರೀತಿ ಹಾಸನ-ಮಂಗಳೂರು ರೈಲ್ವೆ ಮಾರ್ಗದ ಕಾಮಗಾರಿ ಸೆಪ್ಟೆಂಬರ್‌ ವೇಳೆಗೆ ಪೂರ್ಣಗೊಳ್ಳಲಿದೆ. ಪ್ರಾಯೋಗಿಗವಾಗಿ ಸೆಪ್ಟೆಂಬರ್‌ನಿಂದಲೇ ರೈಲ್ವೆ ಸಂಚಾರವನ್ನು ಆರಂಭಿಸುವುದಾಗಿ ರೇವಣ್ಣ ತಿಳಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X