ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಅವರ ಪದಚ್ಯುತಿಗೆ 40ಶಾಸಕರ ಸಹಿ

By Staff
|
Google Oneindia Kannada News

ಸಿದ್ದರಾಮಯ್ಯ ಅವರ ಪದಚ್ಯುತಿಗೆ 40ಶಾಸಕರ ಸಹಿ
ಸಿದ್ದರಾಮಯ್ಯ ಅವರನ್ನು ಸೆಳೆಯಲು ಕಾಂಗ್ರೆಸ್‌ ಮುಖಂಡರ ಯತ್ನ

ಬೆಂಗಳೂರು : ಶಾಸಕಾಂಗ ನಾಯಕ ಸ್ಥಾನದಿಂದ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನುಪದಚ್ಯುತಗೊಳಿಸಲು ಜೆಡಿಎಸ್‌ನಲ್ಲಿ ಸಹಿ ಸಂಗ್ರಹಣೆ ಆರಂಭಗೊಂಡಿದೆ.

ಕುಮಾರಸ್ವಾಮಿ ಅವರ ಬಣ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿಯೇ ಕಣಕ್ಕಿಳಿದಿದೆ. ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರೆಂದೇ ಗುರ್ತಿಸಿಕೊಂಡಿರುವ ಶಾಸಕರಾದ ಸೋಮಶೇಖರ್‌, ಮಹದೇವ್‌, ಕೃಷ್ಣಮೂರ್ತಿ, ಮೇಟಿ ಮತ್ತು ಬಿ.ಆರ್‌.ಪಾಟೀಲ್‌ ಅವರನ್ನು ಹೊರತುಪಡಿಸಿ, ಉಳಿದೆಲ್ಲ ಶಾಸಕರು ಸಹಿ ಹಾಕಿದ್ದಾರೆ ಎನ್ನಲಾಗಿದೆ.

ಮಾಜಿ ಪ್ರಧಾನಿ ದೇವೇಗೌಡರಿಗೆ ಅವಿಶ್ವಾಸದ ಮನವಿ ಪತ್ರವನ್ನು ಸಲ್ಲಿಸುವುದಾಗಿ ಕುಮಾರಸ್ವಾಮಿ ಬಣ ಹೇಳಿಕೊಂಡಿದೆ. ಸಿದ್ದರಾಮಯ್ಯ ಅವರನ್ನು ಪದಚ್ಯುತಗೊಳಿಸಿ ಜೆಡಿಎಸ್‌ನ ನಾಯಕತ್ವವಹಿಸಲು ಎಂ.ಪಿ.ಪ್ರಕಾಶ್‌ ಹಿಂಜರಿದ್ದಾರೆ.

ಈ ಮಧ್ಯೆ ಕಾಂಗ್ರೆಸ್‌ನ ಮಾಜಿ ಸಚಿವರಾದ ವಿಶ್ವನಾಥ್‌, ಎಚ್‌.ಎಂ.ರೇವಣ್ಣ, ವಿಧಾನಸಭೆಯ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಮತ್ತಿತರರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್‌ಗೆ ಸೆಳೆಯುವ ಹಿನ್ನೆಲೆಯಲ್ಲಿ ಮಾತುಕತೆ ನಡೆಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X