ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಣ್ಣ ನಿನ್ನ ಅಂಗಡಿ ಎತ್ತಣ್ಣ -ಜೆಡಿಎಸ್‌ ಶಾಸಕರು

By Staff
|
Google Oneindia Kannada News

ಸಿದ್ದರಾಮಣ್ಣ ನಿನ್ನ ಅಂಗಡಿ ಎತ್ತಣ್ಣ -ಜೆಡಿಎಸ್‌ ಶಾಸಕರು
ಗೌಡರ ಗುದ್ದಿಗೆ ಸಿದ್ದು ನುಜ್ಜು ಗುಜ್ಜು?, ಸಿದ್ದರಾಮಯ್ಯನ ಸ್ಥಾನಕ್ಕೆ ಎಂ.ಪಿ.ಪ್ರಕಾಶ್‌

ಬೆಂಗಳೂರು : ಹುಬ್ಬಳ್ಳಿಯ ಅಹಿಂದ ಸಮಾವೇಶವನ್ನೇ ನೆಪಮಾಡಿಕೊಂಡು, ಜೆಡಿಎಸ್‌ ಶಾಸಕಾಂಗ ಪಕ್ಷದ ಅಧ್ಯಕ್ಷ ಸ್ಥಾನದಿಂದ ಉಪಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಪದಚ್ಯುತಗೊಳಿಸುವ ಪ್ರಯತ್ನ ಫಲಕಾರಿಯಾಗಿದೆ.

ಸಚಿವ ಚೆನ್ನಿಗಪ್ಪ ಅವರ ನಿವಾಸದಲ್ಲಿ ಸೋಮವಾರ ರಾತ್ರಿ ನಡೆದ ಜೆಡಿಎಸ್‌ ಶಾಸಕರ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಪದಚ್ಯುತಗೊಳಿಸಿ, ಆ ಸ್ಥಾನಕ್ಕೆ ಕಂದಾಯ ಸಚಿವ ಎಂ.ಪಿ.ಪ್ರಕಾಶ್‌ ಅವರನ್ನು ನೇಮಕ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಈ ಪ್ರಕ್ರಿಯೆಗಳು ಮುಂದಿನ ಒಂದೆರಡು ದಿನಗಳಲ್ಲಿ ಅಧಿಕೃತ ರೂಪ ಪಡೆಯಲಿವೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಪಕ್ಷದ ಅಧ್ಯಕ್ಷ ತಿಪ್ಪಣ್ಣ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾದ ಸಚಿವ ಡಾ.ಎಚ್‌.ಸಿ.ಮಹಾದೇವಪ್ಪ ಹಾಗೂ ಸತೀಶ್‌ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲು ಜೆಡಿಎಸ್‌ ಶಾಸಕರು ನಿರ್ಧರಿಸಿದ್ದಾರೆ.

ಅಧಿಕೃತ ಸಭೆ ಆ.4ರಂದು : ಸೋಮವಾರ ನಡೆದ ಗೌಡರ ಬಣದ ಜೆಡಿಎಸ್‌ ಶಾಸಕಾಂಗ ಸಭೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಆ.4ರಂದು ಅಧಿಕೃತವಾಗಿ ಜೆಡಿಎಸ್‌ ಶಾಸಕಾಂಗ ಸಭೆ ನಡೆಯಲಿದೆ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.

ಮುಂದೇನು? : ಜೆಡಿಎಸ್‌ ಪಕ್ಷ ಮತ್ತೊಮ್ಮೆ ಒಡೆಯುವ ಸಾಧ್ಯತೆಗಳು ಸಮೀಪದಲ್ಲಿವೆ. ಅಲ್ಪ ಸಂಖ್ಯಾತರು ಮತ್ತು ಹಿಂದುಳಿದ ವರ್ಗದ ನಾಯಕನಾಗುವ ಹಂಬಲದಿಂದ, ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯಕ್ಕೆ ಕಾಂಗ್ರೆಸ್‌ ಬಾಗಿಲಂತೂ ತೆರೆದಿದೆ...ಈ ಪರಿಣಾಮ ಸಮ್ಮಿಶ್ರ ಸರ್ಕಾರದ ಮೇಲೆ ಕಾರ್ಮೋಡಗಳು ತೇಲುತ್ತಿವೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X