ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಿವೃಷ್ಟಿ : ಪ್ರಧಾನಿ ಬಳಿಗೆ ಧರಂ ನೇತೃತ್ವದ ನಿಯೋಗ

By Staff
|
Google Oneindia Kannada News

ಅತಿವೃಷ್ಟಿ : ಪ್ರಧಾನಿ ಬಳಿಗೆ ಧರಂ ನೇತೃತ್ವದ ನಿಯೋಗ
ತಕ್ಷಣದ ಪರಿಹಾರವಾಗಿ ನೈಸರ್ಗಿಕ ವಿಕೋಪ ನಿಧಿಯಿಂದ ಹಣ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ತೊಂದರೆಗೆ ನೆರವು ಕೋರಲು, ಮುಖ್ಯಮಂತ್ರಿ ಧರ್ಮಸಿಂಗ್‌ ನೇತೃತ್ವದ ಉನ್ನತ ಮಟ್ಟದ ನಿಯೋಗ ಪ್ರಧಾನಿ ಮನ್‌ಮೋಹನ್‌ಸಿಂಗ್‌ ಬಳಿಗೆ ತೆರಳಲಿದೆ.

ವಿಧಾನಸಭೆಯ ಶೂನ್ಯವೇಳೆಯಲ್ಲಿ ಕಾಂಗ್ರೆಸ್‌ನ ಸಿದ್ಧು ನ್ಯಾಮಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಲಸಂಪನ್ಮೂಲ ಸಚಿವ ಮಲ್ಲಿಕಾರ್ಜುನ ಖರ್ಗೆ, ಈ ಕುರಿತು ಆಗಸ್ಟ್‌ 6ರಂದು ಮುಖ್ಯಮಂತ್ರಿ ಧರ್ಮಸಿಂಗ್‌ ನೇತೃತ್ವದ ನಿಯೋಗ ದೆಹಲಿಗೆ ತೆರಳಲಿದೆ ಎಂದು ತಿಳಿಸಿದರು.

ಪ್ರಧಾನಿ ಮನ್‌ಮೋಹನ್‌ಸಿಂಗ್‌ ಅವರನ್ನು ಭೇಟಿಯಾಗಿ ಪರಿಹಾರ ಕೋರಿ ಮನವಿ ಸಲ್ಲಿಸಲಾಗುವುದು ಎಂದು ಖರ್ಗೆ ತಿಳಿಸಿದರು.

ವಿಧಾನಸಭೆಯಲ್ಲಿ ಹಣಕಾಸು ಮಸೂದೆ ಅಂಗೀಕಾರವಾಗುತ್ತಿದ್ದಂತೆಯೇ ಪರಿಹಾರ ನಿಧಿ ಬಿಡುಗಡೆಯಾಗಲಿದೆ. ಕೇಂದ್ರೀಯ ತಂಡ ಅತಿವೃಷ್ಟಿಯಲ್ಲಿ ಸಂಭವಿಸಿದ ನಷ್ಟದ ಕುರಿತು ವರದಿ ಸಲ್ಲಿಸಿದ ಮೇಲೆ, ಕೇಂದ್ರ ಸರ್ಕಾರದಿಂದಲೂ ಪರಿಹಾರ ನಿಧಿ ದೊರೆಯಲಿದೆ ಎಂದು ಅವರು ನುಡಿದರು.

ಅತಿವೃಷ್ಟಿ ಪೀಡಿತ ಪ್ರದೇಶಗಳಾದ ಬೆಳಗಾವಿ, ಕೊಡಗು, ಬಾಗಲಕೋಟೆ, ಬೀದರ್‌, ಗುಲ್ಬರ್ಗಾ ಮತ್ತು ಕರಾವಳಿಯ ಜಿಲ್ಲೆಗಳಿಗೆ ತಕ್ಷಣದ ಪರಿಹಾರವಾಗಿ ನೈಸರ್ಗಿಕ ವಿಕೋಪ ನಿಧಿಯಿಂದ ಹಣ ಬಿಡುಗಡೆ ಮಾಡಲಾಗಿದೆ ಎಂದು ಖರ್ಗೆ ತಿಳಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X