ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಲಮಟ್ಟಿ : ಹೆಚ್ಚುವರಿ ನೀರು ಬಿಡಲು ಕರ್ನಾಟಕದ ಸಮ್ಮತಿ

By Staff
|
Google Oneindia Kannada News

ಆಲಮಟ್ಟಿ : ಹೆಚ್ಚುವರಿ ನೀರು ಬಿಡಲು ಕರ್ನಾಟಕದ ಸಮ್ಮತಿ
ಮಹಾರಾಷ್ಟ್ರದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಿಗೆ ಎದುರಾಗಿದ್ದ ಪ್ರವಾಹ ಭೀತಿ ದೂರ

ಮುಂಬಯಿ : ಆಲಮಟ್ಟಿ ಅಣೆಕಟ್ಟೆಯಿಂದ ಹೆಚ್ಚುವರಿನೀರನ್ನು ಹೊರಬಿಡಲು ಕರ್ನಾಟಕ ಒಪ್ಪಿಗೆ ನೀಡಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್‌ರಾವ್‌ ದೇಶ್‌ಮುಖ್‌ ಹೇಳಿದ್ದಾರೆ.

ಬುಧವಾರ ಅವರು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಆಲಮಟ್ಟಿ ಅಣೆಕಟ್ಟೆಯ ಹಿನ್ನೀರಿನಿಂದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳು ಪ್ರವಾಹ ಭೀತಿಗೊಳಗಾಗಿವೆ. ಕರ್ನಾಟಕ ಆಲಮಟ್ಟಿ ಅಣೆಕಟ್ಟೆಯಿಂದ ಹೆಚ್ಚುವರಿ ನೀರನ್ನು ಬಿಡಲು ಒಪ್ಪಿರುವುದರಿಂದ, ಪ್ರವಾಹ ಭೀತಿ ತಪ್ಪಲಿದೆ ಎಂದು ತಿಳಿಸಿದರು.

ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಧರ್ಮಸಿಂಗ್‌ ಅವರೊಡನೆ ಮಾತನಾಡಿದ್ದು, ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ವಿಲಾಸ್‌ರಾವ್‌ ಸ್ಪಷ್ಟಪಡಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X