ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ಧು, ಬೆಂಬಲಿಗ ಸಚಿವರ ವಜಾ : ಅಧಿಕೃತ ಪ್ರಕಟಣೆ

By Staff
|
Google Oneindia Kannada News

ಸಿದ್ಧು, ಬೆಂಬಲಿಗ ಸಚಿವರ ವಜಾ : ಅಧಿಕೃತ ಪ್ರಕಟಣೆ
ಸಿದ್ಧರಾಮಯ್ಯ ರಾಜೀನಾಮೆ ನೀಡಲಿಲ್ಲ, ಆದರೆ ವಜಾ ತಪ್ಪಲಿಲ್ಲ...

ಬೆಂಗಳೂರು : ಉಪಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವರಾದ ಎಚ್‌.ಸಿ.ಮಹಾದೇವಪ್ಪ ಹಾಗೂ ಸತೀಶ್‌ ಜಾರಕಿಹೊಳಿ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ.

ಮುಖ್ಯಮಂತ್ರಿ ಧರ್ಮಸಿಂಗ್‌ ಶಿಫಾರಸಿನ ಅನ್ವಯ ರಾಜ್ಯಪಾಲ ಟಿ.ಎನ್‌.ಚತುರ್ವೇದಿ ಶುಕ್ರವಾರ ಈ ಕ್ರಮ ಕೈಗೊಂಡಿದ್ದಾರೆ. ಶಿಫಾರಸು ಪತ್ರ ಸಲ್ಲಿಕೆಯಾದ ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರ ಹೆಸರಲ್ಲಿ ಅವರ ಕಾರ್ಯದರ್ಶಿ ಗೌರಿ ಎಸ್‌. ತ್ರಿವೇದಿ, ಮೂವರನ್ನು ವಜಾ ಮಾಡಿದ ಅಧಿಸೂಚನೆ ಹೊರಡಿಸಿದರು.

ಈ ಮಧ್ಯೆ ಜಾತ್ಯತೀತ ಜನತಾದಳ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಕಂದಾಯ ಸಚಿವ ಎಂ.ಪಿ.ಪ್ರಕಾಶ್‌ ಅವರಿಗೆ ಮಾನ್ಯತೆ ನೀಡಲಾಗಿದೆ ಎಂದು ವಿಧಾನಸಭೆ ಸ್ಪೀಕರ್‌ ಕೃಷ್ಣ ಪ್ರಕಟಿಸಿದ್ದಾರೆ. ಇದರೊಂದಿಗೆ ಜಾತ್ಯತೀತ ಜನತಾದಳದ ಅಂತರ್ಯುದ್ಧ ನಿರ್ದಿಷ್ಟ ಹಂತ ತಲುಪಿದಂತಾಗಿದೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X