ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಿವೃಷ್ಟಿ ಹಿನ್ನೆಲೆ ನದಿದಂಡೆ ಕಟ್ಟಡಗಳಿಗೆ ವಿಮಾ ಭಾಗ್ಯ

By Staff
|
Google Oneindia Kannada News

ಅತಿವೃಷ್ಟಿ ಹಿನ್ನೆಲೆ ನದಿದಂಡೆ ಕಟ್ಟಡಗಳಿಗೆ ವಿಮಾ ಭಾಗ್ಯ
ಬೆಳೆ ಹಾನಿಗೆ ಒಳಗಾದ ರೈತರಿಗೆ ಎಕರೆ ಒಂದಕ್ಕೆ 800ರೂ. ಪರಿಹಾರ ಧನ -ಧರ್ಮಸಿಂಗ್‌

ಬೆಂಗಳೂರು : ಪ್ರವಾಹ ಮತ್ತಿತರ ಅಪಾಯಗಳ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಕಟ್ಟಡಗಳಿಗೆ ವಿಮೆ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ಕುರಿತು ಮುಖ್ಯಮಂತ್ರಿ ಧರ್ಮಸಿಂಗ್‌ ಮತ್ತು ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್‌ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬೆಳೆವಿಮೆ ಮಾದರಿಯಲ್ಲಿ ಪ್ರಮುಖ ನದಿ ತೀರದ ಗ್ರಾಮಸ್ಥರು ಹಾಗೂ ಆಸ್ತಿಪಾಸ್ತಿಗೆ ವಿಮೆ ಸೌಲಭ್ಯ ಒದಗಿಸುವ ಕುರಿತು ಚಿಂತನೆ ನಡೆದಿದೆ. ಯೋಜನೆಯ ರೂಪುರೇಷೆ ಒಂದೆರಡು ದಿನದಲ್ಲೇ ಸಿದ್ಧವಾಗಲಿದೆ. ವಿಮೆಯ ಪ್ರೀಮಿಯಂ ಮೊತ್ತ ಭರಿಸುವ ಬಗ್ಗೆಯೂ ಸಮಾಲೋಚನೆ ನಡೆದಿದೆ ಎಂದು ಅವರು ತಿಳಿಸಿದರು.

ರೈತರಿಗೆ ನೆರವು : ಬೆಳೆ ಹಾನಿಗೊಳಗಾದ ರೈತರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಎಕರೆಗೆ 400 ರೂಪಾಯಿಯಂತೆ ಪರಿಹಾರ ವಿತರಿಸಲಾಗುತ್ತಿದೆ. ಕೇಂದ್ರದ ಜೊತೆಗೆ ರಾಜ್ಯ ಸರ್ಕಾರವೂ 400ರೂಪಾಯಿಗಳ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ಆಲೋಚಿಸುತ್ತಿದೆ. ಎಂದು ಧರ್ಮಸಿಂಗ್‌ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X