ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆತ್ಮಹತ್ಯೆ : ಮಾಜಿ ಸಚಿವ ವಿಶ್ವನಾಥ್‌ ಪುತ್ರಚೇತರಿಕೆ

By Staff
|
Google Oneindia Kannada News

ಆತ್ಮಹತ್ಯೆ : ಮಾಜಿ ಸಚಿವ ವಿಶ್ವನಾಥ್‌ ಪುತ್ರಚೇತರಿಕೆ
ಪೊಲೀಸರ ಹಲ್ಲೆಯಿಂದ ಬೇಸತ್ತು ಆತ್ಮಹತ್ಯೆಗೆ ಯತ್ನ

ಮೈಸೂರು : ಮಾಜಿ ಸಚಿವ ಎಚ್‌.ವಿಶ್ವನಾಥ್‌ ಅವರ ಪುತ್ರ ಪೂರ್ವಜ್‌ ವಿಶ್ವನಾಥ್‌ ಆತ್ಮಹತ್ಯೆಗೆ ವಿಫಲಯತ್ನ ನಡೆಸಿದ್ದಾರೆ. ಶುಕ್ರವಾರದ ವರದಿಗಳ ಪ್ರಕಾರ ಪೂರ್ವಜ್‌ ಬಿಜೆಎಸ್‌ ಅಪೋಲೋ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಕುವೆಂಪುನಗರದಲ್ಲಿನ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಅವರು ಯತ್ನಿಸಿದ್ದರು. ಪೂರ್ವಜ್‌ ತನ್ನ ಸ್ನೇಹಿತರೊಂದಿಗೆ ಮದ್ಯಪಾನ ಮಾಡಿ, ಕಾರಿನಲ್ಲಿ ಹೋಗುತ್ತಿದ್ದಾಗ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಒಬ್ಬರು ಹಲ್ಲೆ ನಡೆಸಿದ್ದರು. ಈ ಘಟನೆಯನ್ನು ಪತ್ರಿಕೆಯಾಂದು ವರದಿ ಮಾಡಿತ್ತು. ಈ ಎಲ್ಲಾ ಬೆಳವಣಿಗೆಗಳಿಂದ ಮನನೊಂದು ಆತ್ಮಹತ್ಯೆ ಪ್ರಯತ್ನ ನಡೆಸಿರಬಹುದು ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಮಾಜಿ ಸಚಿವ ವಿಶ್ವನಾಥ್‌ ಆಸ್ಪತ್ರೆಗೆ ಧಾವಿಸಿ, ತಮ್ಮ ಪುತ್ರನ ಆರೋಗ್ಯದ ಬಗ್ಗೆ ವೈದ್ಯರಲ್ಲಿ ವಿಚಾರಿಸಿದರು. ಗುರುವಾರ ಪೂರ್ವಜ್‌ನನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X