ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.2ರಿಂದ ಸರ್ಕಾರಿ ಶಾಲೆಗಳಲ್ಲಿ ‘ಸುವರ್ಣ ಜಲ’

By Staff
|
Google Oneindia Kannada News

ಅ.2ರಿಂದ ಸರ್ಕಾರಿ ಶಾಲೆಗಳಲ್ಲಿ ‘ಸುವರ್ಣ ಜಲ’
ರಾಜ್ಯದ 60ಸಾವಿರ ಹಳ್ಳಿಗಳಲ್ಲಿ ನೀರಿನ ಸಮಸ್ಯೆ -ಬಿ.ಸತ್ಯನಾರಾಯಣ

ಬೆಂಗಳೂರು : ಅಂತರ್ಜಲ ಸಂರಕ್ಷಣೆಗಾಗಿ‘ ಸುವರ್ಣ ಜಲ’ ಯೋಜನೆಯನ್ನು ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಅಕ್ಟೋಬರ್‌ 2ರಿಂದ ಜಾರಿಗೊಳಿಸುವುದಾಗಿ ಗ್ರಾಮೀಣ ನೀರು ಸರಬರಾಜು ಖಾತೆ ಸಚಿವ ಬಿ.ಸತ್ಯನಾರಾಯಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 23,683 ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ಪ್ರತಿ ಶಾಲೆಯಲ್ಲಿ 30 ಸಾವಿರ ರೂ. ವೆಚ್ಚದಲ್ಲಿ ನೀರು ಕೊಯ್ಲಿನ ಘಟಕ ಸ್ಥಾಪನೆ ಮಾಡುವುದಾಗಿ ಹೇಳಿದರು.

ಪ್ರತಿ ತಾಲೂಕಿನಲ್ಲಿ ಒಂದು ಗ್ರಾಮವನ್ನು ಆಯ್ಕೆ ಮಾಡಿ, ಮಳೆ ನೀರಿನ ಸಂಗ್ರಹಕ್ಕೆ ಆಸಕ್ತಿವಹಿಸುವ ಕುಟುಂಬದವರಿಗೆ ಪ್ರೋತ್ಸಾಹ ಧನ ನೀಡುವ ಯೋಜನೆ ಸದ್ಯದಲ್ಲಿಯೇ ಅನುಷ್ಠಾನಗೊಳ್ಳಲಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರೂ ರಾಜ್ಯದ 60 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದರು.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X