ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಿ ಜೆಡಿ(ಯು)ನ ‘ಬಾಣ’ ಮುರಿದ ಚು.ಆಯೋಗ

By Staff
|
Google Oneindia Kannada News

ರಾಜ್ಯದಿ ಜೆಡಿ(ಯು)ನ ‘ಬಾಣ’ ಮುರಿದ ಚು.ಆಯೋಗ
ಚುನಾವಣಾ ಆಯೋಗಕ್ಕೆ ಮೇಲ್ಮನವಿ -ಸೋಮಶೇಖರ್‌

ಬೆಂಗಳೂರು : ಕರ್ನಾಟಕ ರಾಜ್ಯದ ಅಧಿಕೃತ ರಾಜಕೀಯ ಪಕ್ಷ ಎನ್ನುವ ಮಾನ್ಯತೆಯನ್ನು ಸಂಯುಕ್ತ ಜನತಾದಳ(ಜೆಡಿ-ಯು) ಕಳೆದು ಕೊಂಡಿದೆ.

ಕಳೆದ ಲೋಕಸಭೆ ಮತ್ತು ವಿಧಾನ ಸಭಾ ಚುನಾವಣೆಯಲ್ಲಿ ಸಂಯುಕ್ತ ಜನತಾದಳದ ಕಳಪೆ ಸಾಧನೆಯನ್ನು ಗಮನಿಸಿರುವ ಕೇಂದ್ರ ಚುನಾವಣಾ ಆಯೋಗ ಈ ಪಕ್ಷದ ಮಾನ್ಯತೆಯನ್ನು ರದ್ದುಪಡಿಸಿದೆ. ಆದರೆ ಬಿಹಾರ, ಜಾರ್ಖಂಡ್‌ ಮತ್ತು ನಾಗಾಲ್ಯಾಂಡ್‌ಗಳಲ್ಲಿ ಅದರ ಜೆಡಿ-ಯು ಸ್ಥಾನಮಾನಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.

ಈ ಬಗ್ಗೆ ಪುನರ್‌ ಪರಿಶೀಲನೆಗೆ ಮೇಲ್ಮನವಿ ಸಲ್ಲಿಸುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಸೋಮಶೇಖರ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಏನಿದು ರಾಜ್ಯ ಪಕ್ಷದ ಮಾನ್ಯತೆ ? : ಅಧಿಕೃತ ರಾಜ್ಯ ಪಕ್ಷದ ಸ್ಥಾನಮಾನ ಉಳಿಸಿಕೊಳ್ಳಲು, ರಾಜಕೀಯ ಪಕ್ಷಗಳು ಇಬ್ಬರು ಶಾಸಕರು ಮತ್ತು ಒಬ್ಬ ಸಂಸದರನ್ನು ಹೊಂದಿರ ಬೇಕು. ಅಲ್ಲದೇ ಒಟ್ಟು ಮತದಾರರಲ್ಲಿ ಕನಿಷ್ಠ ಶೇ.6ರಷ್ಟು ಮತಗಳನ್ನು ಪಡೆದಿರಬೇಕು.

ರಾಜ್ಯದಲ್ಲಿ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಐದು ಸ್ಥಾನ ಪಡೆದಿದ್ದ ಜೆಡಿ-ಯು, ಲೋಕಸಭೆ ಚುನಾವಣೆಯಲ್ಲಿ ಖಾತೆಯನ್ನೇ ತೆರೆದಿರಲಿಲ್ಲ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X