ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರೀಯ ತೋಟಗಾರಿಕೆ ಮಿಷನ್‌ಗೆ ಹಸಿರು ನಿಶಾನೆ

By Staff
|
Google Oneindia Kannada News

ರಾಷ್ಟ್ರೀಯ ತೋಟಗಾರಿಕೆ ಮಿಷನ್‌ಗೆ ಹಸಿರು ನಿಶಾನೆ
ಈಗಾಗಲೇ 83 ಕೋಟಿ ರೂಪಾಯಿ ಬಿಡುಗಡೆ, ಯೋಜನೆಗೆ 13 ಜಿಲ್ಲೆಗಳ ಆಯ್ಕೆ -ಆಲಂಗೂರು ಶ್ರೀನಿವಾಸ್‌

ಬೆಂಗಳೂರು : ಕರ್ನಾಟಕದಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್‌ ಸ್ಥಾಪನೆಗೆ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.

ಈ ಸಂಬಂಧ ರಾಜ್ಯ ಸರ್ಕಾರ ಕಳುಹಿಸಿದ್ದ ಪ್ರಸ್ತಾವನೆಗೆ, ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ತೋಟಗಾರಿಕೆ ಸಚಿವ ಆಲಂಗೂರು ಶ್ರೀನಿವಾಸ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತೋಟಗಾರಿಕೆ ಮಿಷನ್‌ ಮೂಲಕ ಕೈಗೊಳ್ಳಲಾಗುವ ಚಟುವಟಿಕೆಗಳಿಗೆ, ಮೊದಲ ಕಂತಿನಲ್ಲಿ 83ಕೋಟಿ ರೂಪಾಯಿಗಳ ಅನುದಾನ ದೊರೆತಿದೆ . ಮಿಷನ್‌ನ ಪ್ರಥಮ ಸಭೆ ಸೆಪ್ಟೆಂಬರ್‌ 29ರಂದು ನಡೆಯಲಿದ್ದು, ಕಾರ್ಯ ಚಟುವಟಿಕೆಗಳ ರೂಪುರೇಷೆ ನಿರ್ಧರಿಸಲಾಗುವುದು ಎಂದರು.

ರೈತರಿಗೆ ತರಬೇತಿ ನೀಡುವುದಲ್ಲದೇ ರಫ್ತಿಗೆ ಉತ್ತೇಜನ ನೀಡಲಾಗುವುದು. ಇದಕ್ಕಾಗಿ 13 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಆಲಂಗೂರು ಶ್ರೀನಿವಾಸ್‌ ತಿಳಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X