ಖ್ಯಾತ ಅರ್ಥ ಶಾಸ್ತ್ರಜ್ಞ ನಂಜುಂಡಪ್ಪ ನಿಧನ
ಖ್ಯಾತ ಅರ್ಥ ಶಾಸ್ತ್ರಜ್ಞ ನಂಜುಂಡಪ್ಪ ನಿಧನ
ತಮ್ಮ ಸಾಧನೆ ಮತ್ತು ಸೇವೆಯ ಮೂಲಕ ರಾಜ್ಯ ಮತ್ತು ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದ ಅರ್ಥಶಾಸ್ತ್ರಜ್ಞ ಡಿ.ಎಂ. ನಂಜುಂಡಪ್ಪ ಇನ್ನು ನೆನಪು ಮಾತ್ರ ...
ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು. ಮೂವರು ಪುತ್ರಿಯರು ಮತ್ತು ಪತ್ನಿಯನ್ನು ಅವರು ಅಗಲಿದ್ದಾರೆ.
ಇಂಡಿಯನ್ ಕೌನ್ಸಿಲ್ ಆಫ್ ಸೋಸಿಯಲ್ ಸೈನ್ಸ್ ರಿಸರ್ಚ್ನ ಅಧ್ಯಕ್ಷರಾಗಿ ಅವರು ಈ ಹಿಂದೆ ಸೇವೆಸಲ್ಲಿಸಿದ್ದರು. ಧಾರವಾಡ ಮತ್ತು ಬೆಂಗಳೂರು ವಿಶ್ವವಿದ್ಯಾಲಯಗಳ ಉಪ-ಕುಲಪತಿಯಾಗಿ, ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು.
ರೈಲ್ವೆ ಇಲಾಖೆಯ ತೆರಿಗೆ ಸಮಿತಿ ಅಧ್ಯಕ್ಷರಾಗಿ 1991ರಿಂದ 93ರ ಅವಧಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 1994ರಿಂದ 2000 ಅವಧಿಯಲ್ಲಿ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ, 1984-87ರವರೆಗೆ ರಾಜ್ಯ ಸಾಂಸ್ಥಿಕ ಹಣಕಾಸು ಕಾರ್ಯದರ್ಶಿಯಾಗಿ ನಂಜುಂಡಪ್ಪ ಸೇವೆ ಸಲ್ಲಿಸಿದ್ದರು.
ಚಿತ್ರದುರ್ಗ ಜಿಲ್ಲೆಯ ದೊಗ್ಗನಹಾಲ್ ಗ್ರಾಮದ ಬಡ ಕುಟುಂಬದಲ್ಲಿ ಜನಿಸಿದ ಅವರು, ‘ಭಾರತದಲ್ಲಿ ಆರ್ಥಿಕ ನೀತಿ ಮತ್ತು ಸಂಪೂರ್ಣ ಉದ್ಯೋಗ’ ವಿಷಯದಲ್ಲಿ ಡಾಕ್ಟರೇಟ್ ಪಡೆದಿದ್ದರು.
ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಅವರು ಸಂಶೋಧನೆ ಮತ್ತು ಅಧ್ಯಯನ ನಡೆಸಿ, ಡಾಕ್ಟರೇಟ್ ಪದವಿಗಳನ್ನು ತಮ್ಮ ಮಡಿಲಿಗೆ ಸೇರಿಸಿಕೊಂಡಿದ್ದರು. ವಿಶ್ವದ ಖ್ಯಾತ ಅರ್ಥಶಾಸ್ತ್ರಜ್ಞ ಪ್ರೋ. ಜೆ.ಕೆ. ಗ್ಯಾಲ್ಬ್ರೆೃಥ್ ಸೇರಿದಂತೆ ವಿವಿಧ ಖ್ಯಾತ ನಾಮರೊಂದಿಗೆ ನಂಜುಂಡಪ್ಪ ಕೆಲಸ ಮಾಡಿದ್ದರು.
ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಅವರು, ನಂಜುಂಡಪ್ಪ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜ್ಯದ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿ ಮತ್ತು ಪ್ರಾದೇಶಿಕ ಅಸಮಾನತೆ ನಿವಾರಣೆಗೆ ನಂಜುಂಡಪ್ಪ ಅವರ ಸೇವೆ ಶ್ಲಾಘನೀಯ ಎಂದು ಧರ್ಮಸಿಂಗ್ ಸ್ಮರಿಸಿದ್ದಾರೆ.
(ಪಿಟಿಐ)
ಪೂರಕ ಓದಿಗೆ :
ಮುಖಪುಟ / ವಾರ್ತೆಗಳು
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications