ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ಧರ್ಮ’ ಸರ್ಕಾರದ ವಿರುದ್ಧ ಬಿಜೆಪಿ ಸಂಘರ್ಷ ಯಾತ್ರೆ

By Staff
|
Google Oneindia Kannada News

‘ಧರ್ಮ’ ಸರ್ಕಾರದ ವಿರುದ್ಧ ಬಿಜೆಪಿ ಸಂಘರ್ಷ ಯಾತ್ರೆ
ಅ.14ರಿಂದ ರಾಜ್ಯದ 20ಜಿಲ್ಲೆಗಳಲ್ಲಿ ಬಿಜೆಪಿ ಸಂಘರ್ಷಯಾತ್ರೆ

ಬೆಂಗಳೂರು : ರಾಜ್ಯಸಮ್ಮಿಶ್ರ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ರಾಜ್ಯ ಬಿಜೆಪಿ ಘಟಕ, ಅಕ್ಟೋಬರ್‌ 14ರಿಂದ 23ರವರೆಗೆ ರಾಜ್ಯದೆಲ್ಲೆಡೆ ಸಂಘರ್ಷ ಯಾತ್ರೆ ನಡೆಸಲಿದೆ.

ಪಕ್ಷದ ಪ್ರಮುಖ ನಾಯಕರು ಒಂದೇ ಬಸ್‌ನಲ್ಲಿ ಯಾತ್ರೆ ನಡೆಸಲಿದ್ದಾರೆ. ಕೋಲಾರದಿಂದ ಆರಂಭವಾಗುವ ಯಾತ್ರೆ ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾವೇರಿ, ಶಿರಸಿ, ಹುಬ್ಬಳ್ಳಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಬೀದರ್‌, ಗುಲ್ಬರ್ಗ, ಕೊಪ್ಪಳದಲ್ಲಿ ಹಾದು ಅ.23ರಂದು ಗದಗದಲ್ಲಿ ಅಂತ್ಯಗೊಳ್ಳಲಿದೆ.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಸಂಪೂರ್ಣ ಸ್ಥಗಿತಗೊಂಡಿದ್ದು, ಮುಖ್ಯಮಂತ್ರಿಗಳು ತಮ್ಮ ಪ್ರವಾಸ ಕಾಲದಲ್ಲಿ ಹುಸಿ ಭರವಸೆಗಳನ್ನು ನೀಡಿ ಜನರನ್ನು ವಂಚಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುವುದು ಯಾತ್ರೆಯ ಉದ್ದೇಶ ಎಂದು ಪಕ್ಷ ತಿಳಿಸಿದೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X