ನಿಗಮ-ಮಂಡಳಿ ವಿಚಾರ, ಧರಂ ಬಳಿ ಜೆಡಿಎಸ್ ನಿಯೋಗ
ನಿಗಮ-ಮಂಡಳಿ
ವಿಚಾರ,
ಧರಂ
ಬಳಿ
ಜೆಡಿಎಸ್
ನಿಯೋಗ
ಅಧಿಕಾರ
ಹಂಚಿಕೆ
ಒಪ್ಪಂದವನ್ನು
ಕಾಂಗ್ರೆಸ್
ಪಾಲಿಸಲಿ
:
ಎಂ.ಪಿ.ಪ್ರಕಾಶ್
ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಸೋಮವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ನಿಗಮ-ಮಂಡಳಿಗಳ ಮುಖ್ಯಸ್ಥರ ನೇಮಕಾತಿಯಲ್ಲಿ ವಿಳಂಬವಾಗುತ್ತಿದೆ. ಇದರಿಂದ ಸಹಜವಾಗಿಯೇ ಪಕ್ಷದ ಕಾರ್ಯಕರ್ತರು ಮತ್ತು ಶಾಸಕರು ಅಸಮಾಧಾನಗೊಂಡಿದ್ದಾರೆ. ಒಪ್ಪಂದದ ಪ್ರಕಾರ, ರಾಜಕೀಯ ಅಧಿಕಾರ ಹಂಚಿಕೆ ಮತ್ತು ಪ್ರಮುಖ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸುವ ಕುರಿತು ಕಾಂಗ್ರೆಸ್ ಪಕ್ಷವು ಜೆಡಿಎಸ್ನೊಂದಿಗೆ ಸಮಾಲೋಚಿಸಬೇಕು.
ಈ ಸಂಬಂಧ ನನ್ನ ನೇತೃತ್ವದಲ್ಲಿ ಜೆಡಿಎಸ್ ನಾಯಕರು, ಮುಖ್ಯಮಂತ್ರಿ ಧರ್ಮಸಿಂಗ್ ಅವರನ್ನು ಭೇಟಿ ಮಾಡಲಿದ್ದೇವೆ. ಅಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.
ಧರ್ಮಸಿಂಗ್ ಭೇಟಿಯ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಕೈಗಾರಿಕಾ ಸಚಿವ ಪಿ.ಜಿ.ಆರ್.ಸಿಂಧ್ಯಾ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ವಿವರಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು