‘ತೆನೆ ಹೊತ್ತ ಮಹಿಳೆ’ಗಾಗಿ ಸಿದ್ದು-ಗೌಡ ಬಣದ ಕಸರತ್ತು
‘ತೆನೆ
ಹೊತ್ತ
ಮಹಿಳೆ’ಗಾಗಿ
ಸಿದ್ದು-ಗೌಡ
ಬಣದ
ಕಸರತ್ತು
ಬಿಜೆಪಿ
ಮತ್ತು
ಕಾಂಗ್ರೆಸ್
ಜೊತೆ
ಹೊಂದಾಣಿಕೆ
ಇಲ್ಲ
-ಸಿದ್ದರಾಮಯ್ಯ
ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ಮುಂದಿನ ವಾರ ತೀರ್ಪು ನೀಡುವ ಸಾಧ್ಯತೆಗಳಿವೆ. ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣ, ಜೆಡಿಎಸ್ ಪಕ್ಷದ ಚಿಹ್ನೆ ಮತ್ತು ಬಾವುಟಕ್ಕಾಗಿ ಚುನಾವಣಾ ಆಯೋಗಕ್ಕೆ ಈಗಾಗಲೇ ಮನವಿ ಸಲ್ಲಿಸಿದೆ.
ಮತ್ತೊಂದೆಡೆ ಚುನಾವಣಾ ಆಯೋಗಕ್ಕೆ ಸ್ಪಷ್ಟ ಮಾಹಿತಿ ಸಲ್ಲಿಸಿರುವ ದೇವೇಗೌಡ ಬಣದ ಜೆಡಿಎಸ್ ಅಧ್ಯಕ್ಷ ತಿಪ್ಪಣ್ಣ , ಅತಿ ಹೆಚ್ಚಿನ ಶಾಸಕರ ಬೆಂಬಲವಿರುವ ನಮಗೆ ಅಧಿಕೃತ ಚಿಹ್ನೆ ದಕ್ಕಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಲ್ಲೆಡೆ ಸ್ಪರ್ಧೆ : ಕಾಂಗ್ರೆಸ್ ಮತ್ತು ಬಿಜೆಪಿ ಸೇರಿದಂತೆ ಯಾವುದೇ ಪಕ್ಷದೊಂದಿಗೆ ನಮ್ಮ ಪಕ್ಷ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲ ತಾ.ಪಂ ಮತ್ತು ಜಿ.ಪಂ ಚುನಾವಣೆಗಳಲ್ಲಿ ನಮ್ಮ ಪಕ್ಷದಿಂದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು