ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಸರ್ಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಳ

By Staff
|
Google Oneindia Kannada News

ರಾಜ್ಯ ಸರ್ಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಳ
ದೀಪಾವಳಿ-ರಾಜ್ಯೋತ್ಸವದ ಕೊಡುಗೆ, ಜು.1ರಿಂದಲೇ ಅನ್ವಯ

ಬೆಂಗಳೂರು : ದೀಪಾವಳಿ ಮತ್ತು ರಾಜ್ಯೋತ್ಸವದ ಸುಸಂದರ್ಭದಲ್ಲಿಯೇ, ರಾಜ್ಯ ಸರ್ಕಾರ ತನ್ನ ನೌಕರರಿಗೆ ಶೇ.4ರಷ್ಟು ತುಟ್ಟಿ ಭತ್ಯೆ(ಡಿಎ)ಯನ್ನು ಹೆಚ್ಚಿಸಿದೆ.

ಜುಲೈ 1ಕ್ಕೆ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಲಾಗಿದ್ದು, ಕಳೆದ ನಾಲ್ಕು ತಿಂಗಳ ಬಾಕಿ ಹಣವನ್ನು ನಗದು ರೂಪದಲ್ಲಿ ವಿತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಧರ್ಮಸಿಂಗ್‌ ಅವರನ್ನು ಅಭಿನಂದಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್‌.ಎನ್‌. ಶೇಷಗೌಡ, ಕಳೆದ 25ವರ್ಷಗಳ ಇತಿಹಾಸದಲ್ಲಿ ಈ ರೀತಿ ನಗದು ರೂಪದಲ್ಲಿ ಬಾಕಿ ಹಣವನ್ನು ವಿತರಿಸಿದ್ದ ನಿದರ್ಶನಗಳಿಲ್ಲ ಎಂದು ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X