ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೆಂಕಟಾಚಲರ ಆರೋಪ ನಿರಾಧಾರ -ಧರ್ಮಸಿಂಗ್‌

By Staff
|
Google Oneindia Kannada News

ವೆಂಕಟಾಚಲರ ಆರೋಪ ನಿರಾಧಾರ -ಧರ್ಮಸಿಂಗ್‌
ಭ್ರಷ್ಟರಿಗೆ ರಕ್ಷಣೆ ನೀಡುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸ್ಪಷ್ಟನೆ

ಬೆಂಗಳೂರು : ಯಾವುದೇ ಪರಿಸ್ಥಿತಿಯಲ್ಲಿಯೂ ಸಮ್ಮಿಶ್ರ ಸರ್ಕಾರವು ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸುವುದಿಲ್ಲ. ಲೋಕಾಯುಕ್ತದ ಕಾರ್ಯಕಲಾಪಗಳಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ. ಭ್ರಷ್ಟ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ತಪ್ಪದು ಎಂದು ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ಹೇಳಿದ್ದಾರೆ.

ಸರ್ಕಾರ ಭ್ರಷ್ಟರ ರಕ್ಷಣೆಗೆ ನಿಂತಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ರಾಜ್ಯಪಾಲರ ಬಳಿಗೆ ತೆರಳುವುದಾಗಿ ವೆಂಕಟಾಚಲ ಇತ್ತೀಚೆಗೆ ಗುಡುಗಿದ್ದರು. ಅವರ ಹೇಳಿಕೆಗೆ ಸುದ್ದಿಗಾರರ ಬಳಿ ಪ್ರತಿಕ್ರಿಯಿಸಿರುವ ಧರ್ಮಸಿಂಗ್‌, ವೆಂಕಟಾಚಲರ ಹೇಳಿಕೆ ಆಧಾರರಹಿತ ಎಂದಿದ್ದಾರೆ.

ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವ ಹಿನ್ನೆಲೆಯಲ್ಲಿ ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸುವುದಾಗಿ ಅವರು ಭರವಸೆ ನೀಡಿದರು.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X