ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಘವೇಂದ್ರ ಪಾಟೀಲರ ‘ತೇರು’ಗೆ ಕೇಂದ್ರ ಮನ್ನಣೆ

By Staff
|
Google Oneindia Kannada News

ರಾಘವೇಂದ್ರ ಪಾಟೀಲರ ‘ತೇರು’ಗೆ ಕೇಂದ್ರ ಮನ್ನಣೆ
ಇಪ್ಪತ್ತೆರಡು ಮಂದಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಬೆಂಗಳೂರು : ಕನ್ನಡದ ಖ್ಯಾತ ಸಣ್ಣ ಕತೆಗಾರ, ಕಾದಂಬರಿಕಾರ ರಾಘವೇಂದ್ರ ಪಾಟೀಲ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿಯು, ಪ್ರಸಕ್ತ ಸಾಲಿನಲ್ಲಿ 22 ಮಂದಿಗೆ ಪ್ರಶಸ್ತಿಯನ್ನು ಘೋಷಿಸಿದೆ. ರಾಘವೇಂದ್ರ ಪಾಟೀಲರ ‘ತೇರು’ ಕಾದಂಬರಿಗೆ ಈ ಪ್ರಶಸ್ತಿ ಲಭಿಸಿದೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯಲ್ಲಿ ಅನಾಥ ಸೇವಾಶ್ರಮದ ಆಡಳಿತಾಧಿಕಾರಿಯಾಗಿ, ಕಾರ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಪಾಟೀಲ ಈ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಪ್ರಶಸ್ತಿ ಹೊಸ ತಲೆಮಾರಿನ ಲೇಖಕರಿಗೆ ಸಂದ ಮನ್ನಣೆ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಸಾಲಿನಲ್ಲಿ 16 ಪ್ರಶಸ್ತಿಗಳು ಕತೆ, ಕವಿತೆ ವಿಭಾಗಕ್ಕೆ ಹಂಚಿಹೋಗಿದ್ದರೆ, ಇತರ ಆರು ಪ್ರಶಸ್ತಿಗಳು ವಿವಿಧ ಸಾಹಿತ್ಯ ಪ್ರಕಾರಗಳ ಪಾಲಾಗಿವೆ.

(ಇನ್ಫೋ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X