ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಪಾಲ ಟಿ.ಎನ್‌.ಚತುರ್ವೇದಿ ಕುರ್ಚಿಗೆ ಬಾಲಕೃಷ್ಣ ಪಿಳ್ಳೈ?!

By Staff
|
Google Oneindia Kannada News

ರಾಜ್ಯಪಾಲ ಟಿ.ಎನ್‌.ಚತುರ್ವೇದಿ ಕುರ್ಚಿಗೆ ಬಾಲಕೃಷ್ಣ ಪಿಳ್ಳೈ?!
ರಾಜ್ಯಪಾಲ ಟಿ.ಎನ್‌.ಚತುರ್ವೇದಿ ಕುರ್ಚಿಗೆ ಬಾಲಕೃಷ್ಣ ಪಿಳ್ಳೈ?!

ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಾಲಕೃಷ್ಣ ಪಿಳ್ಳೈ ಅವರನ್ನು ನೇಮಕಮಾಡಲಾಗಿದೆ ಎಂಬ ಸುದ್ದಿ ಶುಕ್ರವಾರ ದಟ್ಟವಾಗಿ ಹಬ್ಬಿದೆ.

ರಾಜ್ಯಪಾಲ ಟಿ.ಎನ್‌.ಚತುರ್ವೇದಿ ಅವರನ್ನು ಬೇರೆಡೆಗೆ ವರ್ಗಾಯಿಸುವ ಮಾತುಗಳು, ಕಳೆದ ಕೆಲವು ದಿನಗಳಿಂದ ಕೇಳಿ ಬರುತ್ತಿದ್ದವು. ಮುಖ್ಯಮಂತ್ರಿ ಎನ್‌.ಧರ್ಮಸಿಂಗ್‌ ಮತ್ತು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಬೆನ್ನಲ್ಲಿಯೇ ಈ ಹಠಾತ್‌ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.

ರಾಜ್ಯದಲ್ಲಿ ವಿಧಾನಸಭೆಯ ಮಧ್ಯಂತರ ಚುನಾವಣೆಗೆ ಆಸಕ್ತಿವಹಿಸಿರುವ ಕಾಂಗ್ರೆಸ್‌, ರಾಜ್ಯಪಾಲರ ಬದಲಾವಣೆಗೆ ಮುಂದಾಗಿದೆ ಎಂಬ ಅಂಶಗಳು ಕಂಡುಬಂದಿವೆ.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X