ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜ.27ರಂದು ‘ಧರ್ಮ’ ಸರ್ಕಾರದ ಭವಿಷ್ಯ ನಿರ್ಧಾರ

By Staff
|
Google Oneindia Kannada News

ಜ.27ರಂದು ‘ಧರ್ಮ’ ಸರ್ಕಾರದ ಭವಿಷ್ಯ ನಿರ್ಧಾರ
ಕುದುರೆ ವ್ಯಾಪಾರಕ್ಕೆ ಕಾಂಗ್ರೆಸ್‌ ಯತ್ನ, ಅಂತಿಮ ವಿಜಯ ಬಿಜೆಪಿಗೆ -ವೆಂಕಯ್ಯನಾಯ್ಡು

ಬೆಂಗಳೂರು : ಜನವರಿ 27ರೊಳಗೆ ಸಮ್ಮಿಶ್ರ ಸರ್ಕಾರದ ಬಹುಮತವನ್ನು ಸಾಬೀತು ಪಡಿಸಬೇಕು ಎಂದು ರಾಜ್ಯಪಾಲ ಟಿ.ಎನ್‌.ಚತುರ್ವೇದಿ ಮುಖ್ಯಮಂತ್ರಿ ಧರ್ಮಸಿಂಗ್‌ ಅವರಿಗೆ ಸೂಚಿಸಿದ್ದಾರೆ.

ರಾಜ್ಯಪಾಲರು ಗುರುವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕುಮಾರಸ್ವಾಮಿ ಬಣ ಬೆಂಬಲ ಹಿಂತೆಗೆದುಕೊಂಡಿದ್ದರೂ, ಬಹುಮತ ಸಾಬೀತು ಪಡಿಸುವುದಾಗಿ ಮುಖ್ಯಮಂತ್ರಿ ಧರ್ಮಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಪ್ರತಿಕ್ರಿಯೆ : ಸಮರದಲ್ಲಿ ಸೋಲುವ ಬಗೆಗೆ ಗೊತ್ತಿದ್ದರೂ ಕಾಂಗ್ರೆಸ್‌ ಅನಗತ್ಯ ಪ್ರಯತ್ನ ಮಾಡುತ್ತಿದೆ. ಕುದುರೆ ವ್ಯಾಪಾರ ನಡೆಯುವ ಸಾಧ್ಯತೆಗಳಿವೆ. ಆದರೂ ಜೆಡಿಎಸ್‌ ಮತ್ತು ಬಿಜೆಪಿ ನೇತೃತ್ವದ ಮೈತ್ರಿಕೂಟ ಅಸ್ತಿತ್ವಕ್ಕೆ ಬರುವುದು ಖಚಿತ ಎಂದು ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.

(ಪಿಟಿಐ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X