ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಪಾಲರ ಕೈಯಲ್ಲಿ ಧರ್ಮಸಿಂಗ್‌ ಸರ್ಕಾರದ ಭವಿಷ್ಯ

By Staff
|
Google Oneindia Kannada News

ರಾಜ್ಯಪಾಲರ ಕೈಯಲ್ಲಿ ಧರ್ಮಸಿಂಗ್‌ ಸರ್ಕಾರದ ಭವಿಷ್ಯ
ಸರ್ಕಾರ ರಚನೆಗೆ ಆಹ್ವಾನ ಪಡೆಯಲು ಬಿಜೆಪಿ ಮತ್ತು ಜೆಡಿಎಸ್‌ ಪ್ರಯತ್ನ

ಬೆಂಗಳೂರು : ಮುಖ್ಯಮಂತ್ರಿ ಎನ್‌. ಧರ್ಮಸಿಂಗ್‌ ಸರ್ಕಾರದ ಹಣೆಬರಹವನ್ನು ರಾಜ್ಯಪಾಲ ಟಿ.ಎನ್‌.ಚತುರ್ವೇದಿ ಶನಿವಾರ ಬರೆಯಲಿದ್ದಾರೆ.

ವಿಶ್ವಾಸ ಮತ ಸಾಬೀತು ಪ್ರಕ್ರಿಯೆ, ವಿಧಾನಸಭೆಯಲ್ಲಿ ಶುಕ್ರವಾರ ಗದ್ದಲಕ್ಕೆ ಕಾರಣವಾಯಿತು. ಈ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಕೃಷ್ಣ ಸದನವನ್ನು ಮುಂದೂಡಿದ್ದಾರೆ.

ಶುಕ್ರವಾರ ರಾತ್ರಿ ರಾಜ್ಯಪಾಲರನ್ನು ಭೇಟಿ ಮಾಡಿದ ಧರ್ಮಸಿಂಗ್‌, ವಿಶ್ವಾಸ ಮತ ಸಾಬೀತಿಗೆ ಇನ್ನೆರಡು ದಿನಗಳ ಅವಕಾಶ ಕೇಳಿದ್ದಾರೆ. ಮತ್ತೊಂದು ಕಡೆ, ರಾಜಭವನದ ಮುಂದೆ ತಮ್ಮ ಸಂಖ್ಯಾಬಲ ಪ್ರದರ್ಶಿಸಿದ ಜೆಡಿಎಸ್‌ ಮತ್ತು ಬಿಜೆಪಿ ಶಾಸಕರು, ಧರಂ ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಿದ್ದಾರೆ. ಅಲ್ಲದೇ ಸರ್ಕಾರ ರಚನೆಗೆ ಅವಕಾಶ ಕೋರಿದ್ದಾರೆ.

ಚೆಂಡು ಈಗ ರಾಜ್ಯಪಾಲರ ಅಂಗಳದಲ್ಲಿದ್ದು, ಅವರು ಶನಿವಾರ ಸಂಜೆಯ ವೇಳೆಗೆ ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ.

(ಇನ್ಫೋ ವಾರ್ತೆ)

ಮುಖಪುಟ / ಧರ್ಮ-ಕಾರಣ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X