ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಯಾನಾಯಕ್‌ಗೆ ಜಾಮೀನು ನೀಡಲು ಕೋರ್ಟ್‌ ನಕಾರ

By Staff
|
Google Oneindia Kannada News

ದಯಾನಾಯಕ್‌ಗೆ ಜಾಮೀನು ನೀಡಲು ಕೋರ್ಟ್‌ ನಕಾರ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ಬಂಧನಕ್ಕೆ ಗ್ರೀನ್‌ಸಿಗ್ನಲ್‌?

ನವದೆಹಲಿ : ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಮಾನತ್ತಿಗೊಳಗಾಗಿರುವ ಮುಂಬೈ ಪೊಲೀಸ್‌ ಅಧಿಕಾರಿ ದಯಾನಾಯಕ್‌ ಅವರಿಗೆ, ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ಈ ಹಿಂದೆ ಮುಂಬೈ ಹೈಕೋರ್ಟ್‌ ದಯಾನಾಯಕ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಹೈಕೋರ್ಟ್‌ನ ನಿರ್ಧಾರದಲ್ಲಿ ಮಧ್ಯೆ ಪ್ರವೇಶಿಸದಿರಲು ಸುಪ್ರೀಂ ಕೋರ್ಟ್‌ ನಿರ್ಧರಿಸಿದೆ. ಹೀಗಾಗಿ ದಯಾನಾಯಕ್‌ ಬಂಧನ ಸನ್ನಿಹಿತವಾಗಿದೆ.

83 ರೌಡಿಗಳನ್ನು ಎನ್‌ಕೌಂಟರ್‌ನಲ್ಲಿ ಮುಗಿಸಿದ್ದ ಪೊಲೀಸ್‌ ಅಧಿಕಾರಿ, ಕನ್ನಡಿಗ ದಯಾನಾಯಕ್‌, ಜನಮನ್ನಣೆಗೆ ಪಾತ್ರರಾಗಿದ್ದರು. ಪ್ರಸ್ತುತ ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಆರೋಪಕ್ಕೆ ಅವರೀಗ ತುತ್ತಾಗಿದ್ದಾರೆ. ಅವರ ವಿರುದ್ಧ ಮುಂಬೈನ ಭ್ರಷ್ಟಾಚಾರ ನಿರ್ಮೂಲನ ಬ್ಯುರೋದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

(ಏಜನ್ಸೀಸ್‌)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X