ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ಬಾರೋ ಸಾಧನಕೇರಿಗೆ ಪ್ರಾಧಿಕಾರ’ ರಚನೆಗೆ ಆಗ್ರಹ

By Staff
|
Google Oneindia Kannada News

‘ಬಾರೋ ಸಾಧನಕೇರಿಗೆ ಪ್ರಾಧಿಕಾರ’ ರಚನೆಗೆ ಆಗ್ರಹ
ಕವಿ ನೆನಪಿನುಳಿವಿಗೆ ಪ್ರಾಧಿಕಾರ ಅತ್ಯಗತ್ಯ, ಬೇಂದ್ರೆ ಟ್ರಸ್ಟ್‌ ನಿಂದ ಪ್ರಸ್ತಾವನೆ ಸಲ್ಲಿಕೆ

ಧಾರವಾಡ : ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಬಾರೋ ಸಾಧನಕೇರಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕೆಂದು ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಒತ್ತಾಯಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಟ್ರಸ್ಟ್‌ ಅಧ್ಯಕ್ಷ ಡಾ.ಎಂ.ಎಂ.ಕಲಬುರ್ಗಿ, ಈ ಕುರಿತ ಯೋಜನೆ ಒಳಗೊಂಡ ಪ್ರಸ್ತಾವನೆಯನ್ನು ಈಗಾಗಲೇ ರಾಜ್ಯ ಸರ್ಕಾರಕ್ಕೆ ನೀಡಲಾಗಿದೆ ಎಂದರು.

ಸುವರ್ಣ ಕರ್ನಾಟಕ ಆಚರಣೆ ಸಂದರ್ಭದಲ್ಲಿ ಸರ್ಕಾರ ಪ್ರಾಧಿಕಾರ ಸ್ಥಾಪನೆ ಕುರಿತು ಘೋಷಣೆ ಹೊರಡಿಸಬೇಕು. ಕವಿಯ ನೆನಪು ಸಂರಕ್ಷಿಸಲು ಇಂತಹ ಪ್ರಾಧಿಕಾರ ಸ್ಥಾಪಿಸುವುದು ಅತ್ಯಗತ್ಯ. ಹಾಗಾಗಿ 25 ಎಕರೆ ಭೂಮಿ ಮೀಸಲಿಟ್ಟು, ಆಯುಕ್ತರೊಬ್ಬರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ಕುಮಾರ-ಪರ್ವ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X