ಹೊಸ ನಿರ್ಧಾರ : ಸಿಬಿಎಸ್ಸಿ ಶಾಲೆಗಳಲ್ಲಿ ಕನ್ನಡ ಮಾಧ್ಯಮ
ಹೊಸ
ನಿರ್ಧಾರ
:
ಸಿಬಿಎಸ್ಸಿ
ಶಾಲೆಗಳಲ್ಲಿ
ಕನ್ನಡ
ಮಾಧ್ಯಮ
ಮುಂಬರುವ
ಶೈಕ್ಷಣಿಕ
ವರ್ಷದಿಂದಲೇ
ಜಾರಿ,
ನಿಯಮ
ಉಲ್ಲಂಘಿಸಿದರೆ
ಉಗ್ರ
ಕ್ರಮ
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಪ್ರಾಥಮಿಕ-ಪ್ರೌಢ ಶಿಕ್ಷಣ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಬಸವರಾಜ ಹೊರಟ್ಟಿ , ಈ ವಿಷಯ ಖಚಿತಪಡಿಸಿದ್ದಾರೆ. ರಾಜ್ಯದ ನಿಯಮ ಎಲ್ಲರಿಗೂ ಅನ್ವಯವಾಗಬೇಕು. ಅದರಂತೆ ಐಸಿಎಸ್ಸಿ-ಸಿಬಿಎಸ್ಸಿ ಶಾಲೆಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿಸಬೇಕು. ಆದಷ್ಟು ಬೇಗ ಈ ಕುರಿತು ತೀರ್ಮಾನ ಪ್ರಕಟಿಸಿಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮುಂದಿನ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಹೊಸದಾಗಿ ನಿರಾಕ್ಷೇಪಣಾ ಪತ್ರ(ಎನ್ಓಸಿ) ಕೇಳುವ ಐಸಿಎಸ್ಸಿ-ಸಿಬಿಎಸ್ಸಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಅಥವಾ ಮಾತೃಭಾಷಾ ಮಾಧ್ಯಮದಲ್ಲಿ ಬೋ-ಸಲಾಗುತ್ತಿದ್ದೆಯೇ ಹಾಗೂ ಕನ್ನಡ ಭಾಷೆಯನ್ನು ಕಲಿಸಲಾಗುತ್ತಿದೆಯೇ ಎಂದು ಗಮನಿಸಲಾಗುವುದು. ಈ ನಿಯಮ ಉಲ್ಲಂಘಿಸಿದರೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
(ದಟ್ಸ್ ಕನ್ನಡ ವಾರ್ತೆ)
ಮುಖಪುಟ