ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಡಿ.ವಿ.ಸದಾನಂದಗೌಡ ನೇಮಕ

By Staff
|
Google Oneindia Kannada News

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಡಿ.ವಿ.ಸದಾನಂದಗೌಡ ನೇಮಕ
ಸಂಘಪರಿವಾರದ ಅಚ್ಚುಮೆಚ್ಚು, ಸಂಘಟನಾ ಚತುರನಿಗೊಲಿದ ನಾಯಕತ್ವ

ನವದೆಹಲಿ : ಸಂಘ ಪರಿವಾರದ ನೆಚ್ಚಿನ ವ್ಯಕ್ತಿ ಡಿ.ವಿ.ಸದಾನಂದಗೌಡ ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಸಂಸದ ನೇಮಕಗೊಂಡಿದ್ದಾರೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್‌ ಸಿಂಗ್‌, ಶುಕ್ರವಾರ ಹೊಸ ಅಧ್ಯಕ್ಷರ ನೇಮಕಾತಿ ಪ್ರಕಟಿಸಿದರು. ಅತ್ಯುತ್ತಮ ಸಂಘಟನಾ ಚಾತುರ್ಯ ಹೊಂದಿರುವ ಅವರು, ರಾಜ್ಯದಲ್ಲಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಲಿದ್ದಾರೆ ಎಂದು ಪಕ್ಷ ಹೇಳಿಕೊಂಡಿದೆ.

ಒಬ್ಬರಿಗೆ ಒಂದು ಸ್ಥಾನ ಮಾತ್ರ ಎಂಬ ಮಾತು ಸಾಮಾನ್ಯವಾಗಿ ಎಲ್ಲ ರಾಜಕೀಯ ಪಕ್ಷಗಳು ಪಾಲಿಸಿಕೊಂಡು ಬರುತ್ತಿವೆ. ಬಿಜೆಪಿಯೂ ಇದಕ್ಕೆ ಹೊರತಲ್ಲ. ಜಗದೀಶ್‌ ಶೆಟ್ಟರ್‌ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರಣ, ಅವರ ಸ್ಥಾನಕ್ಕೆ ಸದಾನಂದಗೌಡ ಅವರನ್ನು ನೇಮಕ ಮಾಡಲಾಗಿದೆ.

ಮೂಲತಃ ಸುಳ್ಯ ತಾಲೂಕಿನವರಾದ ಸದಾನಂದಗೌಡ ಪುತ್ತೂರು ವಿಧಾನಸಭಾ ಕ್ಷೇತ್ರವನ್ನು ಸತತ ಎರಡು ಬಾರಿ ಪ್ರತಿನಿಧಿಸಿದ್ದಾರೆ. ಅಲ್ಲದೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರನ್ನು ಭಾರೀ ಅಂತರದಿಂದ ಪರಾಭವಗೊಳಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ವಾರ್ತೆಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X