ಕನಾರ್ಟಕ ರಕ್ಷಣಾ ವೇದಿಕೆಯಿಂದ ಗಡಿನಾಡು ಉತ್ಸವ
ಕನಾರ್ಟಕ
ರಕ್ಷಣಾ
ವೇದಿಕೆಯಿಂದ
ಗಡಿನಾಡು
ಉತ್ಸವ
ಬಾಂಧವ್ಯ
ಬಲಪಡಿಸುವ
ಉದ್ದೇಶ,
ಕನ್ನಡ
ಶಾಲೆಗಳಿಗೆ
ಪ್ರೋತ್ಸಾಹಿಸಲು
ಸರ್ಕಾರಕ್ಕೆ
ಆಗ್ರಹ
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಕನ್ನಡ ನಾಡಿನ ಸಾಂಸ್ಕೃತಿಕ ಬಾಂಧವ್ಯ ಬಲಪಡಿಸುವ ನಿಟ್ಟಿನಲ್ಲಿ ಈ ಉತ್ಸವ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಬೆಳಗಾವಿ ತಾಲ್ಲೂಕಿನ ಹಲವಾರು ಹಳ್ಳಿಗಳಲ್ಲಿ ವಾಸಿಸುತ್ತಿರುವ ಮರಾಠಿ ಮಾತನಾಡುವ ಜನರು, ಆ ಊರುಗಳೆಲ್ಲ ಮಹಾರಾಷ್ಟ್ರಕ್ಕೆ ಸೇರಿವೆ ಘೋಷಿಸಿಕೊಂಡು ಎಂದು ಫಲಕಗಳನ್ನು ಹಾಕಿಕೊಂಡಿದ್ದಾರೆ. ಗಡಿನಾಡ ಉತ್ಸವಕ್ಕೂ ಮೊದಲು ಜಿಲ್ಲಾಡಳಿತ ಈ ಎಲ್ಲ ಫಲಕಗಳನ್ನು ತೆಗೆದುಹಾಕಿಸದಿದ್ದರೆ, ರಕ್ಷಣಾ ವೇದಿಕೆ ಕಾರ್ಯಕರ್ತರು ಈ ಕೆಲಸ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕರ್ನಾಟಕಕ್ಕೆ ವಲಸೆ ಬಂದವರೆಲ್ಲ ಕನ್ನಡ ಸಂಸ್ಕೃತಿ ಮೈಗೂಡಿಸಿಕೊಳ್ಳಬೇಕು. ಇಲ್ಲದಿದ್ದರೆ ಅಂಥವರು ಕರ್ನಾಟಕದಲ್ಲಿ ನೆಲೆಸಲು ಯಾವ ಹಕ್ಕೂ ಇಲ್ಲ ಎಂದು ಅಭಿಪ್ರಾಯಪಟ್ಟರು. ನಗರದಲ್ಲಿ ಸ್ಥಾಪನೆಯಾಗಲಿರುವ ವೈದ್ಯಕೀಯ ಕಾಲೇಜಿಗೆ ಸಂಗೊಳ್ಳಿ ರಾಯಣ್ಣನ ಹೆಸರಿಡಬೇಕು ಹಾಗೂ ಕೇಂದ್ರ ಬಸ್ ನಿಲ್ದಾಣಕ್ಕೆ ರಾಣಿ ಕಿತ್ತೂರು ಚೆನ್ನಮ್ಮನ ಹೆಸರಿಡಬೇಕೆಂದು ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಪಡಿಸಿದರು.
ಮೂಲ ಸೌಕರ್ಯ ಅಭಿವೃದ್ಧಿಪಡಿಸಲು, ಗಡಿಯಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಹಾಗೂ ಸರ್ಕಾರಿ ಕಚೇರಿಗಳನ್ನು ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು. ರಾಜ್ಯ ಸರ್ಕಾರ ಗಡಿನಾಡಿನ ಅಭಿವೃದ್ಧಿ ನಿರ್ಲಕ್ಷಿಸುವಂತಿಲ್ಲ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಮುಖಪುಟ / ವಾರ್ತೆಗಳು