ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ವ್ಯಾಪಕ ಭದ್ರತೆ : ಕುಮಾರಸ್ವಾಮಿ ಸ್ಪಷ್ಟನೆ

By Staff
|
Google Oneindia Kannada News

ರಾಜ್ಯದಲ್ಲಿ ವ್ಯಾಪಕ ಭದ್ರತೆ : ಕುಮಾರಸ್ವಾಮಿ ಸ್ಪಷ್ಟನೆ
ಅಧಿಕಾರಿಗಳೊಂದಿಗೆ ಮಾತುಕತೆ, ಸಾರ್ವಜನಿಕ-ಖಾಸಗಿ ಸಂಸ್ಥೆಗಳೂ ಸುರಕ್ಷಿತ

ಬೆಂಗಳೂರು : ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಭದ್ರತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ಆರ್‌ಪಿಐ(ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ) ಶಾಸಕ ಎಸ್‌.ರಾಜೇಂದ್ರನ್‌ ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡುತ್ತಿದ್ದರು.

ಈ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದು ಮಾತುಕತೆ ನಡೆಸಲಾಗಿದೆ. ಈಗಾಗಲೇ ಸಾರ್ವಜನಿಕ ಸಂಸ್ಥೆಗಳು, ಮಾಹಿತಿ-ತಂತ್ರಜ್ಞಾನ ಕಂಪನಿಗಳು ಹಾಗೂ ಬಹುರಾಷ್ಟ್ರೀಯ ಸಂಸ್ಥೆಗಳಿಗೆ ಭಾರೀ ಭದ್ರತೆ ನೀಡಲಾಗಿದೆ ಎಂದು ತಿಳಿಸಿದರು.

ವಿಧಾನಸೌಧ, ಸಚಿವಾಲಯ ಮೊದಲಾದ ಸ್ಥಳಗಳಲ್ಲೂ ವ್ಯಾಪಕ ಭದ್ರತೆ ನೆಲೆಗೊಂಡಿದೆ. ಅಲ್ಲದೆ ವಿಜ್ಞಾನ ಮಂದಿರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

(ಏಜೆನ್ಸೀಸ್‌)

ಮುಖಪುಟ / ಐಟಿ - ಬಿಟಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X