ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಜಮೀನು ಕಬಳಿಕೆ : ಪ್ರಭಾವಿಗಳಿಗೂ ಸೂಕ್ತ ಶಿಕ್ಷೆ

By Staff
|
Google Oneindia Kannada News

ಸರ್ಕಾರಿ ಜಮೀನು ಕಬಳಿಕೆ : ಪ್ರಭಾವಿಗಳಿಗೂ ಸೂಕ್ತ ಶಿಕ್ಷೆ
ಕಾನೂನಿಗೆ ತಿದ್ದುಪಡಿ, ಜಂಟಿ ಸದನ ಸಮಿತಿ ರಚನೆಗೆ ಚಿಂತನೆ

ಬೆಂಗಳೂರು : ಅಕ್ರಮ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನುಗಳನ್ನು ಕಬಳಿಸುವ ಪ್ರಭಾವಿ ವ್ಯಕ್ತಿಗಳ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಅವರು ಬುಧವಾರ ವಿಧಾನಪರಿಷತ್‌ ಕಲಾಪದ ಶೂನ್ಯವೇಳೆಯಲ್ಲಿ, ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದರು. ಅಕ್ರಮ ದಾಖಲೆ ಸೃಷ್ಟಿಸಿ ಭೂಕಬಳಿಸುವವರು ಯಾರೇ ಆಗಿರಲಿ, ಅಂತಹವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಿ ಶಿಸ್ತಿನ ಕ್ರಮ ಜರುಗಿಸಲಾಗುವುದು. ಅಲ್ಲದೆ ಅಕ್ರಮ ಕಬಳಿಕೆಗೆ ಕಡಿವಾಣ ಹಾಕಲು ಕಾನೂನಿಗೆ ಕೆಲವು ತಿದ್ದುಪಡಿ ತರುವ ಕುರಿತು ಚಿಂತನೆ ನಡೆದಿದೆ ಎಂದು ಅವರು ಸ್ಪಷ್ಟಪಡಿಸಿದರು.

ಭೂಕಬಳಿಕೆ ಮಾಡಿರುವವರ ವಿರುದ್ಧ ತನಿಖೆ ನಡೆಸಲು ಜಂಟಿ ಸದನ ಸಮಿತಿ ರಚಿಸಬೇಕು ಎಂದು ಪ್ರತಿಪಕ್ಷದ ನಾಯಕ ಎಚ್‌.ಕೆ. ಪಾಟೀಲ್‌ ಒತ್ತಾಯಪಡಿಸಿದರು. ಇದಕ್ಕುತ್ತರಿಸಿದ ಶೆಟ್ಟರ್‌, ಈ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ಐಟಿ - ಬಿಟಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X