ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಾ.ಅನಂತಮೂರ್ತಿಗೆ ಬೆಂಬಲ ನೀಡಲು ಕಾಂಗ್ರೆಸ್‌ ನಿರ್ಧಾರ

By Staff
|
Google Oneindia Kannada News

ಡಾ.ಅನಂತಮೂರ್ತಿಗೆ ಬೆಂಬಲ ನೀಡಲು ಕಾಂಗ್ರೆಸ್‌ ನಿರ್ಧಾರ
ಮೊದಲ ಐವತ್ತು ಮತಗಳು ರೆಹಮಾನ್‌ ಖಾನ್‌ಗೆ, ಉಳಿದವು ಅನಂತಮೂರ್ತಿಗೆ

ನವದೆಹಲಿ : ರಾಜ್ಯಸಭಾ ಚುನಾವಣೆಯಲ್ಲಿ ಜ್ಞಾನಪೀಠ ಪರಸ್ಕೃತ ಸಾಹಿತಿ ಡಾ.ಯು.ಆರ್‌.ಅನಂತಮೂರ್ತಿ ಅವರಿಗೆ ಬೆಂಬಲ ನೀಡಲು ಕಾಂಗ್ರೆಸ್‌ ಪಕ್ಷ ತೀರ್ಮಾನಿಸಿದೆ.

ಶನಿವಾರ ಸಂಜೆ ಈ ನಿಮಿತ್ತ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾಜುನ ಖರ್ಗೆ, ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮಾತುಕತೆ ಸಂದರ್ಭದಲ್ಲಿ ಅನಂತಮೂರ್ತಿ ಅವರನ್ನು ಬೆಂಬಲಿಸುವ ಅವಶ್ಯಕತೆ ಇದ್ದು, ಅವರನ್ನು ಬೆಂಬಲಿಸಿ ಎಂದು ಸೋನಿಯಾ ಸೂಚನೆ ನೀಡಿದ್ದಾರೆ.

ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ರೆಹಮಾನ್‌ ಖಾನ್‌ ಗೆಲ್ಲಲು 46 ಮತಗಳ ಅವಶ್ಯಕತೆ ಇದೆ. ಆದರೆ ಅವರಿಗೆ ಅವರಿಗೆ 50 ಮತಗಳನ್ನು ನೀಡಲಾಗುವುದು. ಉಳಿದ 14 ಮತಗಳನ್ನು ಡಾ.ಅನಂತಮೂರ್ತಿಗೆ ನೀಡಲಾಗುವುದು. ಈ ಬೆಳವಣಿಗೆಯಿಂದ ಕಾಂಗ್ರೆಸ್‌ ಪಕ್ಷದ ದ್ವಿತೀಯ ಆದ್ಯತೆ ಡಾ.ಅನಂತಮೂರ್ತಿ ಅವರಿಗೆ ದೊರೆತಂತಾಗಿದೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ಐಟಿ - ಬಿಟಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X