ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರ ಶರಣು : ಹೈಸ್ಕೂಲ್‌ ಶಿಕ್ಷಕರಿಗೂ ವಿಶೇಷ ಭತ್ಯೆ

By Staff
|
Google Oneindia Kannada News

ಸರ್ಕಾರ ಶರಣು : ಹೈಸ್ಕೂಲ್‌ ಶಿಕ್ಷಕರಿಗೂ ವಿಶೇಷ ಭತ್ಯೆ
ಶೀಘ್ರದಲ್ಲೇ ಹೊಸ ಆದೇಶ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಸುಸೂತ್ರ

ಬೆಂಗಳೂರು : ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೂ ವಿಶೇಷ ಭತ್ಯೆ ನೀಡುವುದಾಗಿ ಸರ್ಕಾರ ಪ್ರಕಟಿಸಿದೆ.

ತಾಂತ್ರಿಕ ದೋಷದಿಂದ ಆದೇಶ ತಪ್ಪಾಗಿದ್ದು, ಇದನ್ನು ಸರಿಪಡಿಸಲಾಗುವುದು. ಅಲ್ಲದೆ ಈ ಸಂಬಂಧ ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ಸುದ್ದಿಗಾರರಿಗೆ ಪ್ರೌಢಶಿಕ್ಷಣ ಸಚಿವರು ತಿಳಿಸಿದ್ದಾರೆ.

ಶಿಕ್ಷಕರಲ್ಲಿ ಹರ್ಷ : ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನೀಡಿದ ವಿಶೇಷ ಭತ್ಯೆ ರೂ.200ನ್ನು , ಪ್ರೌಢಶಾಲಾ ಶಿಕ್ಷಕರಿಗೂ ವಿಸ್ತರಿಸಿರುವ ಸರ್ಕಾರದ ನಿರ್ಧಾರವನ್ನು , ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘ ಸ್ವಾಗತಿಸಿದೆ. ಬೇಡಿಕೆಗೆ ಸರ್ಕಾರ ಸ್ಪಂದಿಸಿರುವುದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನವನ್ನು , ಸುಸೂತ್ರವಾಗಿ ಮುಂದುವರೆಸುವುದಾಗಿ ಸಂಘ ತಿಳಿಸಿದೆ.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ಕುಮಾರ ಪರ್ವ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X