ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಚಿಕೆಗೇಡು : ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯ

By Staff
|
Google Oneindia Kannada News

ನಾಚಿಕೆಗೇಡು : ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯ
ಸದ್ಯದಲ್ಲಿಯೇ ಹಿಂಸೆಗೆ ಕಾರಣರಾದ ದುಷ್ಕರ್ಮಿಗಳ ಬಂಧನ -ಕುಮಾರಸ್ವಾಮಿ

ಬೆಂಗಳೂರು : ರಾಜ್‌ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಉಂಟಾದ ಹಿಂಸಾಚಾರದಿಂದ ಅಮಾಯಕರು ಬಲಿಯಾಗಿದ್ದಾರೆ. ಈ ಘಟನೆಯ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಕೆಪಿಸಿಸಿ ಆಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಎನ್‌.ಧರ್ಮಸಿಂಗ್‌, ಎಚ್‌.ಕೆ.ಪಾಟೀಲ್‌ ಸೇರಿದಂತೆ ವಿವಿಧ ಕಾಂಗ್ರೆಸ್‌ ಮುಖಂಡರು ಸಮ್ಮಿಶ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಸರ್ಕಾರದ ವೈಫಲ್ಯ ಮತ್ತು ಬೇಜವಾಬ್ದಾರಿಯಿಂದ ಪರಿಸ್ಥಿತಿ ವಿಷಮಿಸಿತು. ಈ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ, ಕಿಡಿಗೇಡಿಗಳನ್ನು ಶಿಕ್ಷಿಸಬೇಕು ಎಂದು ಕಾಂಗ್ರೆಸ್‌ ಮುಖಂಡರು ಆಗ್ರಹಿಸಿದರು.

ವರನಟನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಾಧ್ಯವಾಗಲಿಲ್ಲ ಅಂದರೆ ನಾಚಿಕೆಗೇಡು. ಜನಸಾಮಾನ್ಯರಿಗೆ ಸಾಧ್ಯವಾಗುವುದಾದರೆ ಅವರಿಗೆ ಯಾಕೆ ಸಾಧ್ಯವಾಗಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೇಲಿ ಮಾಡಿದರು.

ತನಿಖೆಗೆ ಸಿದ್ಧ : ರಾಜ್‌ ಅಭಿಮಾನಿಗಳು ಗಲಭೆಗೆ ಕಾರಣ ಎಂಬುದನ್ನು ಒಪ್ಪಲಾಗುವುದಿಲ್ಲ. ಈ ಘಟನೆಯ ಹಿಂದೆ ಬೇರೆ ಇನ್ಯಾರೋ ಇದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸದ್ಯದಲ್ಲಿಯೇ ದುಷ್ಕರ್ಮಿಗಳ ಸುಳಿವು ಪತ್ತೆಯಾಗಲಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್‌ ಪರಿವಾರವನ್ನು ಭೇಟಿ ಮಾಡಿದ ಅವರು, ಪಾರ್ವತಮ್ಮ ರಾಜ್‌ಕುಮಾರ್‌ ಮತ್ತು ಅವರ ಮಕ್ಕಳಿಗೆ ಸಾಂತ್ವನ ಹೇಳಿದರು. ರಾಜ್‌ ಅಂತಿಮ ಬಯಕೆಯನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು.

(ದಟ್ಸ್‌ ಕನ್ನಡ ವಾರ್ತೆ)

ಮುಖಪುಟ / ಕುಮಾರ ಪರ್ವ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X