ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮೇ.10ರೊಳಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ
ಮೇ.10ರೊಳಗೆ
ಎಸ್ಎಸ್ಎಲ್ಸಿ
ಫಲಿತಾಂಶ
ಪ್ರಕಟ
ಮೈಸೂರಿನ
ಕೆಲವು
ಶಾಲೆಗಳಲ್ಲಿ
ಪ್ರಶ್ನೆಪತ್ರಿಕೆ
ಬಹಿರಂಗ
-ಬಸವರಾಜ
ಹೊರಟ್ಟಿ
ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಸವರಾಜ ಹೊರಟ್ಟಿ, ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯಗೊಂಡಿದೆ. ಫಲಿತಾಂಶ ಪ್ರಕಟಣೆಗೆ ಅಂತಿಮ ಸಿದ್ಧತೆಗಳು ನಡೆದಿವೆ ಎಂದರು.
ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಬಹಿರಂಗಗೊಳಿಸಿದ ಆರೋಪದ ಮೇಲೆ, ಮೈಸೂರಿನ ಶಾರದಾ ವಿಲಾಸ ಪ್ರೌಢಶಾಲೆಯ ಸಹ ಶಿಕ್ಷಕ ಎಚ್.ಬಿ.ಗೋವಿಂದಪ್ಪ ಅವರನ್ನು ಅಮಾನತುಗೊಳಿಸುವುದಾಗಿ ಸಚಿವರು ಹೇಳಿದರು.
ಮೈಸೂರಿನ ಮರಿಮಲ್ಲಪ ್ಪ ಮತ್ತು ಸದ್ವಿದ್ಯ ಶಾಲೆಯಲ್ಲಿ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ, ಪರೀಕ್ಷೆಗೆ ಮೊದಲೇ ಬಹಿರಂಗಗೊಂಡ ಸಂಗತಿ ನಮ್ಮ ಗಮನಕ್ಕೆ ಬಂದಿದೆ ಎಂದು ಸಚಿವ ಬಸವರಾಜ ಹೊರಟ್ಟಿ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
ಮುಖಪುಟ / ವಾರ್ತೆಗಳು
Comments
Story first published: Wednesday, April 19, 2006, 23:53 [IST]